AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ
ಪವನ್​ ಸಿಂಗ್
ನಯನಾ ರಾಜೀವ್
|

Updated on:May 22, 2024 | 11:39 AM

Share

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್(Pawan Singh)​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್​ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಎನ್​ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪವನ್​ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಬಿಜೆಪಿ ಮೊದಲು ಪವನ್​ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್​ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್​ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:24 am, Wed, 22 May 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ