AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ
ಪವನ್​ ಸಿಂಗ್
ನಯನಾ ರಾಜೀವ್
|

Updated on:May 22, 2024 | 11:39 AM

Share

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್(Pawan Singh)​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್​ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಎನ್​ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪವನ್​ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಬಿಜೆಪಿ ಮೊದಲು ಪವನ್​ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್​ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್​ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:24 am, Wed, 22 May 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!