AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ

ಬಾಲಿವುಡ್ ನಟ ಶೇಖರ್​ ಸುಮನ್ ಹಾಗೂ ಕಾಂಗ್ರೆಸ್​ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ ಇಂದು ಸೇರ್ಪಡೆಗೊಂಡರು. ಕಾಂಗ್ರೆಸ್ ವಿರುದ್ಧ ಆಘಾತಕಾರಿ ಆರೋಪಗಳನ್ನು ಮಾಡಿದ ಒಂದು ದಿನದ ನಂತರ ರಾಧಿಕಾ ಖೇರಾ ಬಿಜೆಪಿಗೆ ಸೇರಿದ್ದಾರೆ.

ಲೋಕಸಭಾ ಚುನಾವಣೆ 2024: ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ
ನಯನಾ ರಾಜೀವ್
|

Updated on:May 07, 2024 | 2:01 PM

Share

ಲೋಕಸಭಾ ಚುನಾವಣೆ(Lok Sabha Election)ಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್​ ಸುಮನ್ ಹಾಗೂ ಕಾಂಗ್ರೆಸ್​ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಮನ್​ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಸ್ಪಷ್ಟವಾಗಿಲ್ಲ. ಶೇಖರ್ ಸುಮನ್ ಅವರು ಇತ್ತೀಚೆಗೆ ಬಿಡುಗಡೆಯಾದ ಹಿರಾಮಂಡಿ ವೆಬ್-ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಆಘಾತಕಾರಿ ಆರೋಪಗಳನ್ನು ಮಾಡಿದ ಒಂದು ದಿನದ ನಂತರ ರಾಧಿಕಾ ಖೇರಾ ಬಿಜೆಪಿಗೆ ಸೇರಿದ್ದಾರೆ. ರಾಮ ಮಂದಿರಕ್ಕೆ ಭೇಟಿ ನೀಡಿ ಚಿತ್ರಗಳನ್ನು ಶೇರ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸುಶೀಲ್ ಆನಂದ್ ಶುಕ್ಖಾ ಅವರಿಗೆ ಮದ್ಯ ನೀಡಿದ್ದರು ಮತ್ತು ಕುಡಿದ ಮತ್ತಿನಲ್ಲಿ 5-6 ಪಕ್ಷದ ಕಾರ್ಯಕರ್ತರೊಂದಿಗೆ ಅವರ ಕೊಠಡಿಯ ಬಾಗಿಲು ತಟ್ಟಿದ್ದರು ಎಂದು ಖೇರಾ ಗಂಭೀರ ಆರೋಪ ಮಾಡಿದ್ದರು.

ಮತ್ತಷ್ಟು ಓದಿ: ಮಗುವನ್ನು ಎತ್ತಿ ಮುದ್ದಾಡಿದ ಪ್ರಧಾನಿ ಮೋದಿ, ಸುಂದರ ಕ್ಷಣ ಕಣ್ತುಂಬಿಕೊಂಡ ತಾಯಿ

2012 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಶೇಖರ್ ಸುಮನ್ ರಾಜಕೀಯದಲ್ಲಿ ಇದು ಎರಡನೇ ಅವಧಿಯಾಗಿದೆ. ನಟ 2009 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ವಿರುದ್ಧ ಸ್ಪರ್ಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Tue, 7 May 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ