ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ರಾಹುಲ್ ಹಿಂದೇಟು ಹಾಕುತ್ತಿದ್ದಾರೆ: ಗುಲಾಂ ನಬಿ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸ್ಪರ್ಧಿಸುವುದನ್ನು ತಪ್ಪಿಸಲು ಮತ್ತು ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಸುರಕ್ಷಿತ ಸ್ಥಾನ ಕ್ಕಾಗಿ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ. ಅವರು ತಮ್ಮ ರಾಜಕೀಯ ಪರಂಪರೆಯನ್ನು ಅವಲಂಬಿಸಿದ್ದಕ್ಕಾಗಿ ಒಮರ್ ಅಬ್ದುಲ್ಲಾ ಹಾಗೂ ರಾಹುಲ್​ರನ್ನು ಕಟುವಾಗಿ ಟೀಕಿಸಿದರು.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ರಾಹುಲ್ ಹಿಂದೇಟು ಹಾಕುತ್ತಿದ್ದಾರೆ: ಗುಲಾಂ ನಬಿ
ಗುಲಾಂ ನಬಿ ಆಜಾದ್

Updated on: Apr 18, 2024 | 11:11 AM

ಬಿಜೆಪಿ(BJP) ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹಿಂದೇಟು ಹಾಕುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್(Ghulam Nabi Azad) ಹೇಳಿದ್ದಾರೆ. ಬಿಜೆಪಿ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳನ್ನು ಆಜಾದ್ ತಳ್ಳಿ ಹಾಕಿದ್ದಾರೆ.

ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಉಧಮ್‌ಪುರ ಲೋಕಸಭಾ ಕ್ಷೇತ್ರದ ಉಖ್ರಾಲ್ ಪ್ರದೇಶದ ಸಂಗಲ್‌ದಾನ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಜಾದ್, ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಏಕೆ ಹಿಂದೆ ಸರಿಯುತ್ತಿದ್ದಾರೆ? ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಗಾಂಧಿ ಹೇಳಿಕೊಳ್ಳುತ್ತಾರೆ, ಅವರ ನಡೆ ಬೇರೆಯದನ್ನು ಸೂಚಿಸುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಅಭ್ಯರ್ಥಿ ಜಿ.ಎಂ. ಸರೂರಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿರುವ ಆಜಾದ್, ಕಾಂಗ್ರೆಸ್​ ನೇರ ಸವಾಲನ್ನು ಎದುರಿಸಲು ಹಿಂಜರಿಯುತ್ತಿದೆ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆಯು ಹೆಚ್ಚಿರುವ ಸುರಕ್ಷಿತ ಸ್ಥಾನಗಳನ್ನು ಹುಡುಕುವ ಪ್ರವೃತ್ತಿಯನ್ನು ಟೀಕಿಸಿದರು.

ಮತ್ತಷ್ಟು ಓದಿ: Rahul Gandhi: ಮಂಡ್ಯದಲ್ಲಿ ರಾಹುಲ್​ ಗಾಂಧಿ ಅಬ್ಬರದ ಭಾಷಣ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ರಾಹುಲ್ ಹಾಗೂ ಒಮರ್ ಅಬ್ದುಲ್ಲಾರನ್ನು ಟೀಕಿಸಿದ ಅವರು, ಜೀವನದಲ್ಲಿ ವೈಯಕ್ತಿಕ ತ್ಯಾಗ ಮಾಡಿಲ್ಲ ಮತ್ತು ಇಂದಿರಾ ಗಾಂಧಿ ಮತ್ತು ಶೇಖ್ ಅಬ್ದುಲ್ಲಾ ಅವರಂತಹ ವ್ಯಕ್ತಿಗಳಿಂದ ಪಡೆದ ರಾಜಕೀಯ ಪರಂಪರೆಯನ್ನು ಆನಂದಿಸುತ್ತಿದ್ದಾರೆ. ಇಬ್ಬರೂ ಸ್ವಂತವಾಗಿ ಏನನ್ನೂ ಮಾಡಿಲ್ಲ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us