AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬಿಜೆಪಿಗೆ ಜೂನ್​ 4ರಂದೇ ಅಂತಿಮ ಬೀಳ್ಕೊಡುಗೆ: ಅಖಿಲೇಶ್​ ಯಾದವ್

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನವೇ ಬಿಜೆಪಿಗೆ ಅಂತಿಮ ಬೀಳ್ಕೊಡುಗೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್​ ಯಾದವ್ ಭವಿಷ್ಯ ನುಡಿದಿದ್ದಾರೆ.

Lok Sabha Election: ಬಿಜೆಪಿಗೆ ಜೂನ್​ 4ರಂದೇ  ಅಂತಿಮ ಬೀಳ್ಕೊಡುಗೆ: ಅಖಿಲೇಶ್​ ಯಾದವ್
ಅಖಿಲೇಶ್​ ಯಾದವ್
ನಯನಾ ರಾಜೀವ್
|

Updated on: May 26, 2024 | 11:37 AM

Share

2024ರ ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಭಾರತೀಯ ಜನತಾ ಪಕ್ಷ ಹೀನಾಯ ಸೋಲನ್ನು ಎದುರಿಸಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್(Akhilesh Yadav) ಹೇಳಿದ್ದಾರೆ. ಜೂನ್​ 4ರಂದು ಬಿಜೆಪಿಗೆ ಅಂತಿಮ ಬೀಳ್ಕೊಡುಗೆ ನೀಡಲಾಗುತ್ತದೆ. ಆ ದಿನ ಹಲವು ಮಂದಿಗೆ ಸ್ವಾತಂತ್ರ್ಯದ ದಿನವಾಗಲಿದೆ ಎಂದು ಅಖಿಲೇಶ್​ ಹೇಳಿದ್ದಾರೆ.

ಟೈಮ್ಸ್​ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಖಿಲೇಶ್​, ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಮಿತ್ರಪಕ್ಷವಾಗಿ, ಅಖಿಲೇಶ್ ಯಾದವ್ ಚುನಾವಣಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ವಿರುದ್ಧ ವಾತಾವರಣವನ್ನು ಸೃಷ್ಟಿಸುವಲ್ಲಿ ನಿರತರಾಗಿದ್ದಾರೆ.

ಹಿಂದುಳಿದ ದಲಿತ ಅಲ್ಪಸಂಖ್ಯಾತರು ಅಂದರೆ ಇಂಡಿಯಾ ಬ್ಲಾಕ್ ಮತ್ತು ಎಸ್‌ಪಿಯ ಪಿಡಿಎ ಸೂತ್ರವು ಎನ್‌ಡಿಎಗಿಂತ ಮೇಲುಗೈ ಸಾಧಿಸಲಿದೆ ಎಂದು ಅಖಿಲೇಶ್ ಹೇಳಿಕೊಂಡಿದ್ದಾರೆ. ನಿಮ್ಮ ರಾಜಕೀಯ ಆಕಾಂಕ್ಷೆಗಳ ಲಕ್ನೋಗೆ ಸೀಮಿತ ಎಂದು ಹೇಳುತ್ತಾ ಬಂದಿದ್ದೀರಿ, ಈಗ ಬದಲಾವಣೆ ಆಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಲಕ್ನೋ ಎಂದೂ ಲಕ್ನೋ ಆಗಿಯೇ ಉಳಿಯುತ್ತದೆ. ಲಕ್ನೋವನ್ನು ಯಾರು ತೊರೆಯುತ್ತಾರೆ? ದೆಹಲಿಗೆ ಹಾರಿದವರು ಲಕ್ನೋಗೆ ಮರಳಲೇಬೇಕು ಎಂದರು.

ಮತ್ತಷ್ಟು ಓದಿ: Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ

ಮತದಾರರ ಗಮನ ಸೆಳೆಯಲು ಇಂಡಿಯಾ ಮೈತ್ರಿಕೂಟಕ್ಕೆ ಅನುಕೂಲವಾದ ಅಂಶಗಳ ಬಗ್ಗೆ ಪ್ರಶ್ನಿಸಿದಾಗ ಬಿಜೆಪಿಯ ಸುಳ್ಳು ಅತಿಹೆಚ್ಚು ಕೆಲಸ ಮಾಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಅದರ ಸಾಧನೆ ಶೂನ್ಯ. ಅವರಿಗೆ ರಾಜಕೀಯ ವಿಶ್ವಾಸಾರ್ಹತೆ ಉಳಿದಿಲ್ಲ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿದೆ. ಉತ್ತರ ಪ್ರದೇಶದ 7 ವರ್ಷಗಳನ್ನು ಅದಕ್ಕೆ ಸೇರಿಸಿ, ಅವರು ನೀಡಿದ ಹೇಳಿಕೆಗಳು 17 ವರ್ಷಗಳಲ್ಲಿ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದು ಹೇಳಿದರು.

ಹಲವು ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದು, ಕೆಲ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಹೊರಹೋಗಿವೆ. ಈ ಅನುಭವಗಳು ಭವಿಷ್ಯದಲ್ಲಿ ನಮಗೆ ಮೈತ್ರಿಕೂಟವನ್ನು ಉತ್ತಮವಾಗಿ ನಿಭಾಯಿಸಲು ನೆರವಾಗಲಿದೆ. ಇಂಡಿಯಾ ಮೈತ್ರಿಕೂಟದ ಹಲವು ಮಂದಿ ನಾಯಕರು ಸಭೆಗಳನ್ನು ಹಾಗೂ ಸುಧೀರ್ಘ ಚರ್ಚೆಗಳನ್ನು ನಡೆಸಿರುವುದು ನಮ್ಮ ಬಂಧವನ್ನು ಬೆಳೆಸಲು ನೆರವಾಗಲಿದೆ ಎಂದು ಸಮರ್ಥಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ