AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್​ಗೆ ಗುಡ್​ಬೈ: ಕಂಗನಾ ರಣಾವತ್

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್​ಗೆ ಗುಡ್​ಬೈ: ಕಂಗನಾ ರಣಾವತ್
ಕಂಗನಾImage Credit source: Times Now
ನಯನಾ ರಾಜೀವ್
|

Updated on: May 19, 2024 | 2:20 PM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಗೆದ್ದರೆ ಬಾಲಿವುಡ್​ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ವೈರಲ್ ಆಗುತ್ತಿರುವ ಕಂಗನಾ ಹೇಳಿಕೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ.

ಕಳೆದ ಮಂಗಳವಾರ ಕಂಗನಾ ಚುನಾವಣೆಗೆ ಮಂಡಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಪೂರ್ಣ ಸಮಯವನ್ನು ಪ್ರಚಾರಕ್ಕಾಗಿ ಮೀಸಲಿಟ್ಟಿದ್ದಾರೆ. ಆಜ್​ತಕ್​ಗೆ ನೀಡಿದ್ದ ಸಂದರ್ಶನದಲ್ಲಿ, ಕಂಗನಾ ಮಂಡಿಯನ್ನು ಗೆದ್ದರೆ ಮುಂದಿನ ಯೋಜನೆಗಳೇನು ಎಂದು ಕೇಳಿದಾಗ, ನನಗೆ ಚಲನಚಿತ್ರ ನಿರ್ಮಾಪಕರು ಸಾಕಷ್ಟು ಮಂದಿ ಹೇಳಿದ್ದಾರೆ ನೀನು ಉತ್ತಮ ನಟಿ, ರಾಜಕೀಯಕ್ಕೆ ಹೋಗಬೇಡಿ ಇಲ್ಲೇ ಇರು ಎಂದು ಆದರೆ ನಾನು ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗದಿಂದ ಹೊರಬರುತ್ತೇನೆ ಎಂದರು.

ಕಂಗನಾ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಮತದಾನದ ಮೊದಲು, ನಟಿ ತನ್ನ 91 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಹಿರಂಗಪಡಿಸಿದರು. ಇದರಲ್ಲಿ ಆಭರಣಗಳು, ಕಾರುಗಳು ಮತ್ತು ಸ್ಥಿರ ಆಸ್ತಿಗಳು ಸೇರಿವೆ. ಆಕೆಯ ಸಾಲವೂ 17 ಕೋಟಿ ರೂ. ಇದೆ.

ಮತ್ತಷ್ಟು ಓದಿ: ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಕಂಗನಾ ಅವರು 28.7 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು 62.9 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ ಎಂಬ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ತನು ವೆಡ್ಸ್ ಮನು ನಟಿ ದೇಶಾದ್ಯಂತ ಆಸ್ತಿ ಹೊಂದಿದ್ದು, ಮುಂಬೈನಲ್ಲಿ 16 ಕೋಟಿ ರೂಪಾಯಿ ಮೌಲ್ಯದ ಮೂರು ಮನೆಗಳು ಮತ್ತು 15 ಕೋಟಿ ರೂಪಾಯಿ ಮೌಲ್ಯದ ಮನಾಲಿಯಲ್ಲಿ ಬಂಗಲೆ ಇದೆ.

ಹೆಚ್ಚುವರಿಯಾಗಿ, ಅವರು ಚಂಡೀಗಢದಲ್ಲಿ ನಾಲ್ಕು ಆಸ್ತಿಗಳನ್ನು ಹೊಂದಿದ್ದಾರೆ, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡವನ್ನು ಹೊಂದಿದ್ದಾರೆ. ಹಿಮಾಚಲಪ್ರದೇಶದಲ್ಲಿ ಜೂನ್​ 1ರಂದು ಮತದಾನ ನಡೆಯಲಿದೆ. ಕಂಗನಾ ಕೇವಲ 12ನೇ ತರಗತಿ ಪಾಸಾಗಿದ್ದಾರೆ, ಗ್ಯಾಂಗ್​ಸ್ಟರ್ ಚಿತ್ರದ ಮೂಲಕ ಕಂಗನಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು