AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನು ಎತ್ತಿ ಮುದ್ದಾಡಿದ ಪ್ರಧಾನಿ ಮೋದಿ, ಸುಂದರ ಕ್ಷಣ ಕಣ್ತುಂಬಿಕೊಂಡ ತಾಯಿ

Lok Sabha Elections 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಅಹಮದಾಬಾದ್​ನಲ್ಲಿ ಮೋದಿ ಮತದಾನ ಮಾಡಿ ಹೊರಬಂದ ಬಳಿಕ ಅಲ್ಲೇ ಇದ್ದ ಮಗುವೊಂದನ್ನು ಎತ್ತಿಕೊಂಡು ಮುದ್ದಿಸಿದ ಸುಂದರ ವಿಡಿಯೋ ಇಲ್ಲಿದೆ.

Follow us
ನಯನಾ ರಾಜೀವ್
|

Updated on: May 07, 2024 | 12:20 PM

ಪ್ರಧಾನಿ ನರೇಂದ್ರ ಮೋದಿ(Narendra Modi)ಯನ್ನು ಭೇಟಿ ಮಾಡಬೇಕೆನ್ನುವ ಕನಸು ಬಹಳಷ್ಟು ಮಂದಿಗಿರುತ್ತದೆ, ಕೆಲವರಿಗೆ ಅದು ಸಾಧ್ಯವಾಗಬಹುದು ಇನ್ನೂ ಕೆಲವರಿಗೆ ಸಾಧ್ಯವಾಗದೇ ಇರಬಹುದು. ಪ್ರಧಾನಿ ಮೋದಿ ಅಹಮದಾಬಾದ್​ನಲ್ಲಿ ಮತದಾನ ಮುಗಿಸಿ ಹಿಂದಿರುಗುವಾಗ ಆ ಕಡೆ ಈ ಕಡೆ ಬ್ಯಾರಿಕೇಡ್​ ಪಕ್ಕದಲ್ಲಿ ನೂರಾರು ಜನರು ನಿಂತಿದ್ದರು. ಅಲ್ಲಿದ್ದ ಮಗುವೊಂದನ್ನು ಮೋದಿ ಎತ್ತಿ ಮುದ್ದಾಡಿರುವ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ತನ್ನ ಮಗು ಮೋದಿ ಕೈಯಲ್ಲಿರುವುದನ್ನು ಕಂಡು ತಾಯಿ ಭಾವುಕರಾಗಿ ಕೈಮುಗಿದಿದ್ದಾರೆ.

ಅದಾದ ಬಳಿಕ ಮಹಿಳೆಯೊಬ್ಬರು ಅವರಿಗೆ ರಾಖಿ ಕಟ್ಟಿ ಹಾರೈಸಿದ್ದಾರೆ. ಪ್ರಧಾನಿ ಕೈ ಮುಗಿದು ಅವರ ಆಶೀರ್ವಾದ ಪಡೆದರು. ಪ್ರಧಾನಿ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ ನಂತರ ರಸ್ತೆಯ ಎರಡೂ ಬದಿಗಳಿಂದ ಕೈ ಬೀಸುತ್ತಿದ್ದ ಜನರ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಈ ದೃಶ್ಯಗಳು ಕಂಡು ಬಂದವು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕ್ಷೇತ್ರದ ಅಭ್ಯರ್ಥಿ. ಇಂದು ಬೆಳಗ್ಗೆ ಮತದಾನ ಮಾಡಲು ಪ್ರಧಾನಿ ಮೋದಿ ಸೋಮವಾರ ತಡರಾತ್ರಿ ಗುಜರಾತ್ ತಲುಪಿದ್ದಾರೆ. ಮತಗಟ್ಟೆಯಲ್ಲಿ ಶಾ ಅವರ ಜೊತೆಗಿದ್ದರು. ಅವರು ತಮ್ಮ ಸಾಂಪ್ರದಾಯಿಕ ಕುರ್ತಾ ಪೈಜಾಮ ಮತ್ತು ಕೇಸರಿ ಬಣ್ಣದ ಜಾಕೆಟ್ ಧರಿಸಿದ್ದರು.

ಮತ್ತಷ್ಟು ಓದಿ:ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಮತಗಟ್ಟೆಯಿಂದ ಹೊರನಡೆಯುತ್ತಿದ್ದಂತೆ ಬೆರಳಿನಲ್ಲಿರುವ ಶಾಯಿ ಗುರುತು ತೋರಿಸುತ್ತಾ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದರು.ತಮ್ಮ ಎಕ್ಸ್​ ಖಾತೆಯಲ್ಲಿ ವಿವಿಧ ಭಾಷೆಗಳಲ್ಲಿ ಪೋಸ್ಟ್ ಮಾಡಿದ್ದರು.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಲೋಕಸಭಾ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಈ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಅಸ್ಸಾಂ (4), ಬಿಹಾರ (5), ಛತ್ತೀಸ್‌ಗಢ (7), ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು (2), ಗೋವಾ (2), ಗುಜರಾತ್ (25). ), ಕರ್ನಾಟಕ (14), ಮಹಾರಾಷ್ಟ್ರ (11), ಮಧ್ಯಪ್ರದೇಶ (8), ಉತ್ತರ ಪ್ರದೇಶ (10) ಮತ್ತು ಪಶ್ಚಿಮ ಬಂಗಾಳ (4). ಸೂರತ್‌ ಕ್ಷೇತ್ರವನ್ನು ಬಿಜೆಪಿ ಅವಿರೋಧವಾಗಿ ಗೆದ್ದುಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು