AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?

ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ವಯನಾಡಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇದೀಗ ರಾಯ್​ಬರೇಲಿಯಿಂದಲೂ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?
ರಾಹುಲ್ ಗಾಂಧಿImage Credit source: Mint
ನಯನಾ ರಾಜೀವ್
|

Updated on:May 03, 2024 | 8:16 AM

Share

ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಅಮೇಥಿ ಬದಲಿಗೆ ಉತ್ತರ ಪ್ರದೇಶದ ರಾಯ್​ಬರೇಲಿ(Raebareli) ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾರ ಹೆಸರು ಕೇಳಿಬಂದಿದೆ. ರಾಹುಲ್​ ಗಾಂಧಿ ರಾಯ್​ಬರೇಲಿ ಹೊರತಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸಿದ್ದು ಅಲ್ಲಿ ಚುನಾವಣೆ ಮುಗಿದಿದೆ. ರಾಯ್​ ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ. ವಯನಾಡಿನಲ್ಲಿ ಏಪ್ರಿಲ್​ 26ರಂದು ಚುನಾವಣೆ ನಡೆದಿತ್ತು. ಇಷ್ಟು ದಿನಗಳ ಕಾಲ ಇದ್ದ ಸಸ್ಪೆನ್ಸ್​ ಇಂದು ಕೊನೆಗೊಂಡಿದೆ ಪ್ರಿಯಾಂಕಾ ಗಾಂಧಿ ಎಲ್ಲೂ ಸ್ಪರ್ಧಿಸುತ್ತಿಲ್ಲ ಎಂಬುದೂ ತಿಳಿದುಬಂದಿದೆ.

ಬಿಜೆಪಿಯು ದಿನೇಶ್​ ಪ್ರತಾಪ್ ಸಿಂಗ್ ಅವರನ್ನು ರಾಯ್​ಬರೇಲಿಯಿಂದ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂಗ್​ ಸೋನಿಯಾ ವಿರುದ್ಧ ಸೋತಿದ್ದರು. ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್​ಬರೇಲಿ ಕಾಂಗ್ರೆಸ್​ನ ಭದ್ರಕೋಟೆಗಳಾಗಿದ್ದವು.

ರಾಹುಲ್ ಗಾಂಧಿ 2004ರಿಂದ 2019ರವರೆಗೆ ಸತತ ಮೂರು ಅವಧಿಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಅವರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಕೊನೆಗೆ ಸೋಲು ಅನುಭವಿಸಿದರು.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿ ಹೇಳಿದ 10 ಸುಳ್ಳುಗಳು

ರಾಹುಲ್​ ಗಾಂಧಿಗಿಂತ ಮೊದಲು ಅವರು ತಾಯಿ ಸೋನಿಯಾ ಗಾಂಧಿ 1999-2004ರವರೆಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಿಂತ ಮೊದಲು ಸಂಜಯ್​ ಗಾಂಧಿ ಹಾಗೂ ರಾಜೀವ್​ ಗಾಂಧಿ ಪ್ರತಿನಿಧಿಸಿದ್ದರು.

ಮತ್ತೊಂದೆಡೆ ರಾಯ್​ ಬರೇಲಿಯನ್ನು 2004 ರಿಂದ 2024ರವರೆಗೆ ಸುಮಾರು ಎರಡು ದಶಕಗಳ ಕಾಲ ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು. ಈ ವರ್ಷದ ಆರಂಭದಲ್ಲಿ ಮಾಜಿ ಕಾಂಗ್ರೆಸ್​ ಅಧ್ಯಕ್ಷೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಅನಾರೋಗ್ಯದ ನೆಪವೊಡ್ಡಿ ರಾಜ್ಯಸಭೆಗೆ ತೆರಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Fri, 3 May 24

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್