AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?

ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ವಯನಾಡಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇದೀಗ ರಾಯ್​ಬರೇಲಿಯಿಂದಲೂ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?
ರಾಹುಲ್ ಗಾಂಧಿImage Credit source: Mint
ನಯನಾ ರಾಜೀವ್
|

Updated on:May 03, 2024 | 8:16 AM

Share

ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಅಮೇಥಿ ಬದಲಿಗೆ ಉತ್ತರ ಪ್ರದೇಶದ ರಾಯ್​ಬರೇಲಿ(Raebareli) ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾರ ಹೆಸರು ಕೇಳಿಬಂದಿದೆ. ರಾಹುಲ್​ ಗಾಂಧಿ ರಾಯ್​ಬರೇಲಿ ಹೊರತಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸಿದ್ದು ಅಲ್ಲಿ ಚುನಾವಣೆ ಮುಗಿದಿದೆ. ರಾಯ್​ ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ. ವಯನಾಡಿನಲ್ಲಿ ಏಪ್ರಿಲ್​ 26ರಂದು ಚುನಾವಣೆ ನಡೆದಿತ್ತು. ಇಷ್ಟು ದಿನಗಳ ಕಾಲ ಇದ್ದ ಸಸ್ಪೆನ್ಸ್​ ಇಂದು ಕೊನೆಗೊಂಡಿದೆ ಪ್ರಿಯಾಂಕಾ ಗಾಂಧಿ ಎಲ್ಲೂ ಸ್ಪರ್ಧಿಸುತ್ತಿಲ್ಲ ಎಂಬುದೂ ತಿಳಿದುಬಂದಿದೆ.

ಬಿಜೆಪಿಯು ದಿನೇಶ್​ ಪ್ರತಾಪ್ ಸಿಂಗ್ ಅವರನ್ನು ರಾಯ್​ಬರೇಲಿಯಿಂದ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂಗ್​ ಸೋನಿಯಾ ವಿರುದ್ಧ ಸೋತಿದ್ದರು. ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್​ಬರೇಲಿ ಕಾಂಗ್ರೆಸ್​ನ ಭದ್ರಕೋಟೆಗಳಾಗಿದ್ದವು.

ರಾಹುಲ್ ಗಾಂಧಿ 2004ರಿಂದ 2019ರವರೆಗೆ ಸತತ ಮೂರು ಅವಧಿಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಅವರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಕೊನೆಗೆ ಸೋಲು ಅನುಭವಿಸಿದರು.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿ ಹೇಳಿದ 10 ಸುಳ್ಳುಗಳು

ರಾಹುಲ್​ ಗಾಂಧಿಗಿಂತ ಮೊದಲು ಅವರು ತಾಯಿ ಸೋನಿಯಾ ಗಾಂಧಿ 1999-2004ರವರೆಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಿಂತ ಮೊದಲು ಸಂಜಯ್​ ಗಾಂಧಿ ಹಾಗೂ ರಾಜೀವ್​ ಗಾಂಧಿ ಪ್ರತಿನಿಧಿಸಿದ್ದರು.

ಮತ್ತೊಂದೆಡೆ ರಾಯ್​ ಬರೇಲಿಯನ್ನು 2004 ರಿಂದ 2024ರವರೆಗೆ ಸುಮಾರು ಎರಡು ದಶಕಗಳ ಕಾಲ ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು. ಈ ವರ್ಷದ ಆರಂಭದಲ್ಲಿ ಮಾಜಿ ಕಾಂಗ್ರೆಸ್​ ಅಧ್ಯಕ್ಷೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಅನಾರೋಗ್ಯದ ನೆಪವೊಡ್ಡಿ ರಾಜ್ಯಸಭೆಗೆ ತೆರಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Fri, 3 May 24

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!