AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೋತ್ತರ ಸಮೀಕ್ಷೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಎಎಪಿ ಅಭ್ಯರ್ಥಿ

ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ನಾನು ತಲೆಬೋಳಿಸಿಕೊಳ್ಳುತ್ತೇನೆ ಎಂದು ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್​ ಭಾರ್ತಿ ಹೇಳಿದ್ದಾರೆ. ಚುನಾವಣೋತ್ತರ ಸಮೀಕ್ಷೆ ಸುಳ್ಳೆಂದು ಹೇಳಿರುವ ಅವರು ಜೂನ್​ 4ರಂದು ನಿಜವಾದ ಫಲಿತಾಂಶ ಹೊರಬರಲಿದೆ ಎಂದರು.

ಚುನಾವಣೋತ್ತರ ಸಮೀಕ್ಷೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಎಎಪಿ ಅಭ್ಯರ್ಥಿ
ಸೋಮನಾಥ್​ ಭಾರ್ತಿ
ನಯನಾ ರಾಜೀವ್
|

Updated on: Jun 02, 2024 | 12:22 PM

Share

ಚುನಾವಣೋತ್ತರ ಸಮೀಕ್ಷೆ(Exit Poll) ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್​ ಭಾರ್ತಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಎಲ್ಲರ ಕಣ್ಣು ಜೂನ್ 4ರತ್ತ ನೆಟ್ಟಿದೆ.ಇದಕ್ಕೂ ಮುನ್ನ ಪ್ರಸಾರವಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್​ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ. ಈ ಕುರಿತು ಮಾತನಾಡಿದ ಸೋಮನಾಥ್​ ಭಾರ್ತಿ, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಿ. ಜೂನ್​ 4 ರಂದು ಫಲಿತಾಂಶ ತಲೆಕೆಳಕಾಗುತ್ತದೆ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದರು.

ದೆಹಲಿಯ ಎಲ್ಲಾ ಏಳು ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ. ಮೋದಿಯ ಭಯದಿಂದಾಗಿ ಎಕ್ಸಿಟ್ ಪೋಲ್‌ಗಳು ಸೋಲುವುದನ್ನು ತೋರಿಸಲು ಸಾಧ್ಯವಿಲ್ಲ ಎಂದರು. ಜೂನ್ 4 ರಂದು ನಿಜವಾದ ಫಲಿತಾಂಶ ಬರುವವರೆಗೆ ನಾವೆಲ್ಲರೂ ಕಾಯಬೇಕು. ಜನರು ಬಿಜೆಪಿ ವಿರುದ್ಧ ಭಾರಿ ಮತ ಹಾಕಿದ್ದಾರೆ ಎಂದು ಹೇಳಿದರು.

ಮತ್ತಷ್ಟು ಓದಿ: Exit Polls: ಯು ಟರ್ನ್ ಹೊಡೆದ ಕಾಂಗ್ರೆಸ್; ಟಿವಿಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು ಇಂಡಿಯ ಬಣ ನಿರ್ಧಾರ

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ವಿಫಲವಾಗಿದೆ. ಬಿಜೆಪಿ ಇಲ್ಲಿ ಎಲ್ಲಾ ಏಳು ಸ್ಥಾನಗಳನ್ನು ಗೆಲ್ಲಬಹುದು. ಮತ್ತೊಂದೆಡೆ, ಇಂಡಿಯಾ ಟುಡೇ – ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ ಈ ಬಾರಿ ದೆಹಲಿಯಲ್ಲಿ ಒಂದು ಸ್ಥಾನವನ್ನು ಕಳೆದುಕೊಳ್ಳಬಹುದು. ದೆಹಲಿಯಲ್ಲಿ ಬಿಜೆಪಿ 54% ಮತಗಳನ್ನು ಗಳಿಸಬಹುದು ಎಂದು ಎಕ್ಸಿಟ್ ಪೋಲ್ ಅಂದಾಜಿಸಿದೆ ಮತ್ತು ವಿರೋಧ ಪಕ್ಷದ ಮೈತ್ರಿ 44% ಮತಗಳನ್ನು ಪಡೆಯುತ್ತದೆ.

ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ (2014 ಮತ್ತು 2019) ಬಿಜೆಪಿ ಎಲ್ಲಾ ಏಳು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಎಎಪಿ 4 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು