AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಚುನಾವಣೆ, ಪ್ರಚಾರ ವೀಕ್ಷಿಸಲು 25 ವಿದೇಶಿ ನಾಯಕರಿಗೆ ಬಿಜೆಪಿ ಆಹ್ವಾನ

ಬೇರೆ ದೇಶ ರಾಜಕೀಯ ನಾಯಕರನ್ನು ಭಾರತದ ಚುನಾವಣೆ ಹಾಗೂ ಪ್ರಚಾರವನ್ನು ವೀಕ್ಷಿಸಲು ಆಹ್ವಾನ ನೀಡಲಾಗಿದೆ. ಈ ಬಾರಿ ಬಿಜೆಪಿ ಪ್ರಚಾರದಲ್ಲಿ ವಿದೇಶಿ ನಾಯಕರು ಭಾಗಿಯಾಗುತ್ತಿದ್ದಾರೆ. ಬಿಜೆಪಿಯು 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಆಹ್ವಾನವನ್ನು ಕಳುಹಿಸಿದ್ದು, ಹದಿಮೂರು ಪಕ್ಷಗಳು ಇದುವರೆಗೆ ಆಹ್ವಾನವನ್ನು ಸ್ವೀಕರಿಸಿವೆ

ಲೋಕಸಭಾ ಚುನಾವಣೆ: ಚುನಾವಣೆ, ಪ್ರಚಾರ ವೀಕ್ಷಿಸಲು 25 ವಿದೇಶಿ ನಾಯಕರಿಗೆ ಬಿಜೆಪಿ ಆಹ್ವಾನ
ಅಕ್ಷಯ್​ ಪಲ್ಲಮಜಲು​​
|

Updated on:Apr 13, 2024 | 10:09 AM

Share

ಈ ಬಾರಿ ಲೋಕಸಭೆ ಚುನಾವಣೆ (Lok Sabha Elections) ಪ್ರಚಾರ ಕಾವೇರಿದೆ. ಎಲ್ಲ ಕಡೆ ತಮ್ಮ ಪಕ್ಷಗಲ ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಿಂದ ಹಿಡಿದು ಎಲ್ಲ ರೀತಿಯ ಪ್ರಚಾರ ತಂತ್ರಗಳನ್ನು ರಾಜಕೀಯ ಪಕ್ಷಗಳು ಮಾಡುತ್ತಿದೆ. ಇದರ ನಡುವೆ ಬಿಜೆಪಿ ಶತಾಯಗತಾಯ ಈ ಬಾರಿ ಮತ್ತೆ ನಾವು ಅಧಿಕಾರಕ್ಕೆ ಬರಲೇಬೇಕು, 400ಕ್ಕಿಂತ ಹೆಚ್ಚು ಸ್ಥಾನವನ್ನು NDA ಮಿತ್ರ ಪಕ್ಷ ಪಡೆಯಲೇಬೇಕು ಎಂಬ ಗುರಿಯನ್ನು ಇಟ್ಟುಕೊಂಡಿದೆ. ಬಿಜೆಪಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಪ್ರಚಾರವನ್ನು ಪ್ರಾರಂಭಿಸಿದೆ. ಇನ್ನು ಈ ಪ್ರಚಾರಕ್ಕೆ ಸ್ಟಾರ್ ನಟ-ನಟಿಯರನ್ನು ಕೂಡ ಬಳಸಿಕೊಂಡಿದೆ. ಇದೇ ಮೊದಲ ಬಾರಿಗೆ ಬೇರೆ ದೇಶ ರಾಜಕೀಯ ನಾಯಕರನ್ನು ಭಾರತದ ಚುನಾವಣೆ ಹಾಗೂ ಪ್ರಚಾರವನ್ನು ವೀಕ್ಷಿಸಲು ಆಹ್ವಾನ ನೀಡಲಾಗಿದೆ. ಈ ಬಾರಿ ಬಿಜೆಪಿ ಪ್ರಚಾರದಲ್ಲಿ ವಿದೇಶಿ ನಾಯಕರು ಭಾಗಿಯಾಗುತ್ತಿದ್ದಾರೆ.

ಈ ನಾಯಕರು ಭಾರತೀಯ ಜನತಾ ಪಕ್ಷದ ಆಹ್ವಾನದ ಮೇರೆಗೆ ಭಾರತದಲ್ಲಿರುತ್ತಾರೆ. ಭಾರತೀಯ ಎಕ್ಸ್‌ಪ್ರೆಸ್‌ ಪ್ರತಿಕೆ ವರದಿಯ ಪ್ರಕಾರ ಇದು ವಿಶ್ವದ ಅತಿದೊಡ್ಡ ಚುನಾವಣಾ ಪ್ರಚಾರವಾಗಿದೆ. ಸದ್ಯಕ್ಕೆ, ಬಿಜೆಪಿಯು 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಆಹ್ವಾನವನ್ನು ಕಳುಹಿಸಿದ್ದು, ಹದಿಮೂರು ಪಕ್ಷಗಳು ಇದುವರೆಗೆ ಆಹ್ವಾನವನ್ನು ಸ್ವೀಕರಿಸಿವೆ ಎಂದು ವರದಿ ಹೇಳಿದೆ.

ಯುನೈಟೆಡ್ ಸ್ಟೇಟ್ಸ್‌ನ ಎರಡು ರಾಜಕೀಯ ಪಕ್ಷಗಳು – ಆಡಳಿತಾರೂಢ ಡೆಮೋಕ್ರಾಟ್‌ಗಳು ಮತ್ತು ಆಪ್ ರಿಪಬ್ಲಿಕನ್‌ಗಳನ್ನು ಆಹ್ವಾನಿಸಲಾಗಿಲ್ಲ ಏಕೆಂದರೆ ಅಲ್ಲಿಯೂ ಕೂಡ ಚುನಾವಣೆ ನಡೆಯುವ ಕಾರಣ ಅವರು ಈ ಪ್ರಚಾರಕ್ಕೆ ಬರುತ್ತಿಲ್ಲ ಎಂದು ವರದಿ ಹೇಳಿದೆ. ಯುನೈಟೆಡ್ ಕಿಂಗ್‌ಡಮ್‌ನ ಕನ್ಸರ್ವೇಟಿವ್ ಮತ್ತು ಲೇಬರ್ ಪಕ್ಷಗಳು ಮತ್ತು ಜರ್ಮನಿಯ ಕ್ರಿಶ್ಚಿಯನ್ ಡೆಮಾಕ್ರಾಟ್‌ಗಳು ಮತ್ತು ಸಾಮಾಜಿಕ ಪ್ರಜಾಪ್ರಭುತ್ವವಾದಿ ಪಕ್ಷವನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ ಎಂದು ಹೇಳಿ ಯೂಟರ್ನ್​ ಹೊಡೆದ ಮಿಸಾ ಭಾರ್ತಿ

ನೆರೆಯ ರಾಷ್ಟ್ರವಾದ ಬಾಂಗ್ಲಾದೇಶ ಆಡಳಿತಾರೂಢ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ ಹಾಗೂ ನೇಪಾಳದ ಪ್ರಮುಖ ರಾಜಕೀಯ ಪಕ್ಷಗಳೂ ಆಹ್ವಾನ ಪಟ್ಟಿಯಲ್ಲಿವೆ. ಇನ್ನು ಈ ಪ್ರಚಾರದಲ್ಲಿ ಭಾಗವಹಿಸುವ ನಾಯಕರು ಪ್ರಧಾನಿ ಮೋದಿ, ಗೃಹಸಚಿವ ಅಮಿತ್​ ಶಾ, ಜೆಪಿ ನಡ್ಡಾ ಪರ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:05 am, Sat, 13 April 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ