AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್​ ಜೈಲಿಗೆ ತೆರಳಬೇಕಿದೆ. ಅವರ ಮಧ್ಯಂತರ ಜಾಮೀನು ಅವಧಿ ಮುಗಿದಿದೆ. ಅವರು 21 ದಿನಗಳ ಕಾಲ ಜಾಮೀನಿನ ಮೇಲೆ ಹೊರಗಿದ್ದರು.

ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on: Jun 02, 2024 | 9:29 AM

Share

ಒಂದೆಡೆ ಲೋಕಸಭಾ ಚುನಾವಣೆಯೂ ಮುಕ್ತಾಯಗೊಂಡಿದೆ, ಮತ್ತೊಂದೆಡೆ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ಜಾಮೀನು ಅವಧಿ ಕೂಡ ಅಂತ್ಯಗೊಂಡಿದ್ದು ಇಂದು ತಿಹಾರ್​ ಜೈಲಿಗೆ ಮರಳಲಿದ್ದಾರೆ. ಅದಕ್ಕೂ ಮುನ್ನ ತಮ್ಮ ಪಕ್ಷದ ನಾಯಕರೊಂದಿಗೆ ಚಿಂತನ-ಮಂಥನ ನಡೆಸಿದರು.

ಗಂಭೀರ ಅನಾರೋಗ್ಯದ ಶಂಕೆ ವ್ಯಕ್ತಪಡಿಸಿರುವ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್​ ಮೊರೆ ಹೋಗಿದ್ದರು, ಅರ್ಜಿಯ ಆದೇಶವನ್ನು ಕೋರ್ಟ್​ ಜೂನ್​ 5ಕ್ಕೆ ಮುಂದೂಡಿದೆ.

ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ತಿಹಾರ್ ಜೈಲಿಗೆ ಹೋಗುವ ಮೊದಲು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ, ಡಿಡಿಯು ಮಾರ್ಗದಲ್ಲಿರುವ ಪಕ್ಷದ ಕಚೇರಿ ಮತ್ತು ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಅವರು ತಮ್ಮ ಅನುಪಸ್ಥಿತಿಯಲ್ಲಿ ಪಕ್ಷದ ಒಗ್ಗಟ್ಟು ಕಾಪಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ಅರವಿಂದ್ ಕೇಜ್ರಿವಾಲ್​ 55 ದಿನಗಳ ಕಾಲ ಜೈಲಿನಲ್ಲಿದ್ದ ಬಳಿಕ ಮೇ 10ರಂದು ಜಾಮೀನಿನ ಮೇಲೆ ಹೊರಬಂದಿದ್ದರು. ಅವರು 10 ದಿನಗಳ ಕಾಲ ಇಡಿ ವಶದಲ್ಲಿದ್ದರು. ಏಪ್ರಿಲ್​ 1 ರಂದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿತು. ಅಲ್ಲಿ 39 ದಿನಗಳನ್ನು ಕಳೆದರು. ಇದೀಗ ಮತ್ತೊಮ್ಮೆ ಕೇಜ್ರಿವಾಲ್ ತಿಹಾರ್​ ಜೈಲಿಗೆ ಶರಣಾಗಬೇಕಿದೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ಗೆ ಇಡಿ 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಕೇಜ್ರಿವಾಲ್​ ಅಪರಾಧಿ ಎಂದು ಘೋಷಿಸಲಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?