AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’: ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಮೋದಿ ಕಿಡಿ

ಬಿಹಾರದ ಅರಾರಿಯಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಮನಮೋಹನ್ ಸಿಂಗ್​ ಅವರು ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳಿಲ್ಲವೆಂದು ಕಾಂಗ್ರೆಸ್​ ಆರೋಪಿಸಿತ್ತು. ಆದರೆ, ಇಂದು ಅವರ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದ್ದು, ಅದರಲ್ಲಿ ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’ ಎಂದು ಮನಮೋಹನ್ ಸಿಂಗ್ ಅವರು ಅದನ್ನೇ ಹೇಳಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’: ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಮೋದಿ ಕಿಡಿ
ಪ್ರಧಾನಿ ಮೋದಿ
TV9 Web
| Edited By: |

Updated on:Apr 26, 2024 | 10:14 PM

Share

ಬಿಹಾರ, ಏಪ್ರಿಲ್​ 26: ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಹಿಂದೆ, ಮನಮೋಹನ್ ಸಿಂಗ್ (Manmohan Singh) ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ವಿರುದ್ಧ ಗುಡುಗಿದ್ದರು. ಇದೀಗ ಅದೇ ಮನಮೋಹನ್ ಸಿಂಗ್​ ಅವರ ಮತ್ತೊಂದು ಹಳೆಯ ವಿಡಿಯೋವೊಂದು ವೈರಲ್​ ಆಗಿದ್ದು ಆ ಕುರಿತಾಗಿ ಮತ್ತೆ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮನಮೋಹನ್ ಸಿಂಗ್​ ಅವರು ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಯಾವತ್ತು ಹೇಳಿಲ್ಲವೆಂದು ಕಾಂಗ್ರೆಸ್​ ಆರೋಪಿಸಿತ್ತು. ಆದರೆ, ಇಂದು ಅವರ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದ್ದು, ಅದರಲ್ಲಿ ಅವರು ಅದನ್ನೇ ಹೇಳಿದ್ದಾರೆ. ಈ ಹಿಂದೆ ನನ್ನ ಹೇಳಿಕೆಯನ್ನು ಅಲ್ಲಗಳೆಯುತ್ತಿದ್ದ ಮಾಧ್ಯಮಗಳು ಈಗ ಮೌನವಹಿಸಿವೆ. ಯಾವುದೇ ಸೂಕ್ತ ಮಾಹಿತಿಯಿಲ್ಲದೆ ಅಥವಾ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಮಾಧ್ಯಮಗಳು ನನ್ನ ಮೇಲೆ ಹೇಗೆ ದಾಳಿ ಮಾಡುತ್ತಿವೆ ಎಂಬುದನ್ನು ನಾನು ನೋಡುತ್ತಿದ್ದೆ’ ಎಂದಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ

‘ಕಾಂಗ್ರೆಸ್ ಮುಸ್ಲಿಂರಿಗೆ ಮಾತ್ರ ಆದ್ಯತೆ ನೀಡುತ್ತಿರುವ ಬಗ್ಗೆ ಮಾತನಾಡಿದಾಗ ಕೆಲವರು ತುಂಬಾ ಕೋಪಗೊಳ್ಳುತ್ತಾರೆ. ಕಳೆದ ವಾರದಿಂದ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದು ನಾನು ಅವರೆಲ್ಲರಿಗೂ ಒಂದು ಸವಾಲು ಹಾಕುತ್ತೇನೆ. ಮೊದಲು ನೀವು ಇದನ್ನು ಅರ್ಥಮಾಡಿಕೊಳ್ಳಿ, 25 ವರ್ಷಗಳು ಕಳೆದಿವೆ. ನೀವು ನನ್ನನ್ನು ಹೆದರಿಸಲು ಸಾಕಷ್ಟು ಪ್ರಯತ್ನಿಸಿದ್ದೀರಿ ಆದರೆ ಇಲ್ಲಿಯವರೆಗೆ ನೀವು ನನ್ನನ್ನು ಹೆದರಿಸಲು ಸಾಧ್ಯವಾಗಲಿಲ್ಲ. ಈಗ ಆ ಪ್ರಯತ್ನವನ್ನು ನಿಲ್ಲಿಸಿ’ ಎಂದು ಕಿಡಿಕಾರಿದ್ದಾರೆ.

ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಮೋದಿ, ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಪ್ರಣಾಳಿಕೆಯೂ ಅದನ್ನೇ ಹೇಳುತ್ತಿದೆ. ನಿಮ್ಮ ಸಂಪತ್ತನ್ನ ಯಾರಿಗೆ ಹೆಚ್ಚು ಮಕ್ಕಳಿದೆ ಅವರಿಗೆ ಹಂಚಲಿದ್ದಾರೆ. ನುಸುಳುಕೋರರಿಗೆ ಹಂಚಲಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮುಸ್ಲಿಂರ ಕುರಿತು ಮನಮೋಹನ್ ಸಿಂಗ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ರಶೀದ್ ಅಲ್ವಿ ಕಿಡಿ

ಮನಮೋಹನ್​​ ಸಿಂಗ್​​​ ಅವರ ಹಳೆಯ ಹೇಳಿಕೆಯನ್ನು ಇಟ್ಟುಕೊಂಡು ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​​ಗೆ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅವರ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಆದ್ಯತೆ ಬಗ್ಗೆ ಬಿಜೆಪಿ ಒಂದು ವಿಡಿಯೋವೊಂದು ವೈರಲ್​​ ಮಾಡಿದೆ.

ಮುಸ್ಲಿಮರ ಬಗ್ಗೆ ಮನಮೋಹನ್‌ ಸಿಂಗ್‌ ಹೇಳಿದ್ದೇನು?

ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೇ ಮೊದಲ ಅಧಿಕಾರ ಇತ್ತು. ಕಾಂಗ್ರೆಸ್‌ನವರು ದೇಶದ ಸಂಪತ್ತನ್ನು ಒಟ್ಟುಗೂಡಿಸಿ ಅಕ್ರಮ ವಲಸಿಗರು, ಹೆಚ್ಚು ಮಕ್ಕಳನ್ನು ಹೊಂದಿರುವ ಸಮುದಾಯಕ್ಕೆ ನೀಡಲಿದೆ. ನಿಮ್ಮ ಶ್ರಮದ ಹಣವನ್ನು ಅಕ್ರಮ ವಲಸಿಗರಿಗೆ ನೀಡಬೇಕೆ? ನೀವು ಇದನ್ನು ಒಪ್ಪುವಿರೇ? ಕಾಂಗ್ರೆಸ್‌ ಪ್ರಣಾಳಿಕೆ ಇದನ್ನು ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು. ಇದೇ ವಿಡಿಯೋವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 pm, Fri, 26 April 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ