AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಉತ್ತರ ಪ್ರದೇಶದ ಅಮೇಥಿಯಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​ ಇನ್ನೂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿ ಹಾಗೂ ರಾಬರ್ಟ್​ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ
ಸ್ಮೃತಿ ಇರಾನಿImage Credit source: NDTV
ನಯನಾ ರಾಜೀವ್
|

Updated on: Apr 23, 2024 | 12:08 PM

Share

ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತಕ್ಕೆ ಎಲ್ಲೆಡೆ ತಯಾರಿ ನಡೆದಿದೆ. ಆದರೆ ಉತ್ತರ ಪ್ರದೇಶದ ಅಮೇಥಿ(Amethi)ಯಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ(Rahul Gandhi) ಹಾಗೂ ರಾಬರ್ಟ್​ ವಾದ್ರಾ(Robert Vadra) ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ವಾಗ್ದಾಳಿ ನಡೆಸಿದ್ದಾರೆ. ‘ಜೀಜಾಜೀ ಕಾ ನಜರ್ ಹೈ, ಸಾಲೆ ಸಾಹಬ್ ಕ್ಯಾ ಕರೇಂಗೆ’ ಅಂದರೆ ಸ್ಥಾನದ ಮೇಲೆ ಬಾವ ಕಣ್ಣಿಟ್ಟಿದ್ದಾರೆ ರಾಹುಲ್​ ಗಾಂಧಿ ಏನು ಮಾಡ್ತಾರೆ ಎನ್ನುವ ಅರ್ಥವನ್ನು ನೀಡುವಂತೆ ಸ್ಮೃತಿ ಹೇಳಿದ್ದಾರೆ.

ಬಸ್​ಗಳಲ್ಲಿ ಪ್ರಯಾಣಿಸುವ ಮುನ್ನ ಕರವಸ್ತ್ರವನ್ನು ಹಾಕಿ ಸೀಟು ಹಿಡಿಯುವ ಕಾಲವೊಂದಿತ್ತು. ಈಗ ರಾಬರ್ಟ್​ ವಾದ್ರಾ ಆ ಸೀಟಿನ ಮೇಲೆ ಕಣ್ಣೀಟ್ಟಿರುವ ಕಾರಣ ಆ ಆಸನದ ಮೇಲೆ ಯಾರಿಗೂ ಕೂರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ರಾಬರ್ಟ್​ ವಾದ್ರಾ 2019ರಲ್ಲಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಬಹುದು ಎನ್ನುವ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲಿ ಸ್ಮೃತಿ ಈ ಹೇಳಿಕೆ ನೀಡಿದ್ದಾರೆ. ಮೇ 20ರಂದು ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಅಮೇಥಿಯಲ್ಲಿ ಮತದಾನ ನಡೆಯಲಿದೆ.

ಮತ್ತಷ್ಟು ಓದಿ: ಅಮೇಠಿ ರೈತರನ್ನು ಲೂಟಿ ಮಾಡಿದ ಗಾಂಧಿ ಕುಟುಂಬ, 600 ರೂ.ಗೆ 30 ಎಕರೆ ಭೂಮಿ ತೆಗೆದುಕೊಂಡರು: ಸ್ಮೃತಿ ಇರಾನಿ ಕಿಡಿಕಿಡಿ

ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಐದು ವರ್ಷಗಳಲ್ಲಿ ಏನು ಮಾಡಬಲ್ಲೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ಕೂಡ ಅವರಿಗೆ ಕಷ್ಟವಾಗುತ್ತಿರುವಂತಿದೆ. 2019ರ ಚುನಾವಣೆಯಲ್ಲಿ ರಾಹುಲ್​ ಗಾಂಧಿಯನ್ನು ಸೋಲಿಸುವ ಮೊದಲು ಮೂರು ಬಾರಿ ಸತತವಾಗಿ ಅವರು ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಾಂದಿ, ರಾಜೀವ್ ಗಾಂಧಿ, ಸಂಜಯ್​ ಗಾಂಧಿ ಕೂಡ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದನ್ನು ಕಾಂಗ್ರೆಸ್​ನ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು.

ಕೇರಳದ ವಯನಾಡಿನಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಮೇಥಿಯಿಂದಲೂ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು, ಆಗ ಪ್ರತಿಕ್ರಿಯಿಸಿದ್ದ ರಾಹುಲ್ ಪಕ್ಷ ಏನು ಹೇಳುತ್ತದೋ ಹಾಗೆ ಕೇಳುತ್ತೇನೆ ಎಂದಿದ್ದರು. ವಯನಾಡಿನಲ್ಲಿ ಏಪ್ರಿಲ್​ 26ರಂದು ಮತದಾನ ನಡೆಯಲಿದ್ದು, ಅದಾದ ಬಳಿಕ ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದರ ಬಗ್ಗೆ ತಿಳಿಸಬಹುದು ಎನ್ನುವ ಊಹಾಪೋಹಗಳು ಶುರುವಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ