AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಉತ್ತರ ಪ್ರದೇಶದ ಅಮೇಥಿಯಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​ ಇನ್ನೂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿ ಹಾಗೂ ರಾಬರ್ಟ್​ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ
ಸ್ಮೃತಿ ಇರಾನಿImage Credit source: NDTV
ನಯನಾ ರಾಜೀವ್
|

Updated on: Apr 23, 2024 | 12:08 PM

Share

ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತಕ್ಕೆ ಎಲ್ಲೆಡೆ ತಯಾರಿ ನಡೆದಿದೆ. ಆದರೆ ಉತ್ತರ ಪ್ರದೇಶದ ಅಮೇಥಿ(Amethi)ಯಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ(Rahul Gandhi) ಹಾಗೂ ರಾಬರ್ಟ್​ ವಾದ್ರಾ(Robert Vadra) ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ವಾಗ್ದಾಳಿ ನಡೆಸಿದ್ದಾರೆ. ‘ಜೀಜಾಜೀ ಕಾ ನಜರ್ ಹೈ, ಸಾಲೆ ಸಾಹಬ್ ಕ್ಯಾ ಕರೇಂಗೆ’ ಅಂದರೆ ಸ್ಥಾನದ ಮೇಲೆ ಬಾವ ಕಣ್ಣಿಟ್ಟಿದ್ದಾರೆ ರಾಹುಲ್​ ಗಾಂಧಿ ಏನು ಮಾಡ್ತಾರೆ ಎನ್ನುವ ಅರ್ಥವನ್ನು ನೀಡುವಂತೆ ಸ್ಮೃತಿ ಹೇಳಿದ್ದಾರೆ.

ಬಸ್​ಗಳಲ್ಲಿ ಪ್ರಯಾಣಿಸುವ ಮುನ್ನ ಕರವಸ್ತ್ರವನ್ನು ಹಾಕಿ ಸೀಟು ಹಿಡಿಯುವ ಕಾಲವೊಂದಿತ್ತು. ಈಗ ರಾಬರ್ಟ್​ ವಾದ್ರಾ ಆ ಸೀಟಿನ ಮೇಲೆ ಕಣ್ಣೀಟ್ಟಿರುವ ಕಾರಣ ಆ ಆಸನದ ಮೇಲೆ ಯಾರಿಗೂ ಕೂರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ರಾಬರ್ಟ್​ ವಾದ್ರಾ 2019ರಲ್ಲಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಬಹುದು ಎನ್ನುವ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲಿ ಸ್ಮೃತಿ ಈ ಹೇಳಿಕೆ ನೀಡಿದ್ದಾರೆ. ಮೇ 20ರಂದು ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಅಮೇಥಿಯಲ್ಲಿ ಮತದಾನ ನಡೆಯಲಿದೆ.

ಮತ್ತಷ್ಟು ಓದಿ: ಅಮೇಠಿ ರೈತರನ್ನು ಲೂಟಿ ಮಾಡಿದ ಗಾಂಧಿ ಕುಟುಂಬ, 600 ರೂ.ಗೆ 30 ಎಕರೆ ಭೂಮಿ ತೆಗೆದುಕೊಂಡರು: ಸ್ಮೃತಿ ಇರಾನಿ ಕಿಡಿಕಿಡಿ

ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಐದು ವರ್ಷಗಳಲ್ಲಿ ಏನು ಮಾಡಬಲ್ಲೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ಕೂಡ ಅವರಿಗೆ ಕಷ್ಟವಾಗುತ್ತಿರುವಂತಿದೆ. 2019ರ ಚುನಾವಣೆಯಲ್ಲಿ ರಾಹುಲ್​ ಗಾಂಧಿಯನ್ನು ಸೋಲಿಸುವ ಮೊದಲು ಮೂರು ಬಾರಿ ಸತತವಾಗಿ ಅವರು ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಾಂದಿ, ರಾಜೀವ್ ಗಾಂಧಿ, ಸಂಜಯ್​ ಗಾಂಧಿ ಕೂಡ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದನ್ನು ಕಾಂಗ್ರೆಸ್​ನ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು.

ಕೇರಳದ ವಯನಾಡಿನಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಮೇಥಿಯಿಂದಲೂ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು, ಆಗ ಪ್ರತಿಕ್ರಿಯಿಸಿದ್ದ ರಾಹುಲ್ ಪಕ್ಷ ಏನು ಹೇಳುತ್ತದೋ ಹಾಗೆ ಕೇಳುತ್ತೇನೆ ಎಂದಿದ್ದರು. ವಯನಾಡಿನಲ್ಲಿ ಏಪ್ರಿಲ್​ 26ರಂದು ಮತದಾನ ನಡೆಯಲಿದ್ದು, ಅದಾದ ಬಳಿಕ ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದರ ಬಗ್ಗೆ ತಿಳಿಸಬಹುದು ಎನ್ನುವ ಊಹಾಪೋಹಗಳು ಶುರುವಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ