AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಉತ್ತರ ಪ್ರದೇಶದ ಅಮೇಥಿಯಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​ ಇನ್ನೂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿ ಹಾಗೂ ರಾಬರ್ಟ್​ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ
ಸ್ಮೃತಿ ಇರಾನಿImage Credit source: NDTV
ನಯನಾ ರಾಜೀವ್
|

Updated on: Apr 23, 2024 | 12:08 PM

Share

ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತಕ್ಕೆ ಎಲ್ಲೆಡೆ ತಯಾರಿ ನಡೆದಿದೆ. ಆದರೆ ಉತ್ತರ ಪ್ರದೇಶದ ಅಮೇಥಿ(Amethi)ಯಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ(Rahul Gandhi) ಹಾಗೂ ರಾಬರ್ಟ್​ ವಾದ್ರಾ(Robert Vadra) ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ವಾಗ್ದಾಳಿ ನಡೆಸಿದ್ದಾರೆ. ‘ಜೀಜಾಜೀ ಕಾ ನಜರ್ ಹೈ, ಸಾಲೆ ಸಾಹಬ್ ಕ್ಯಾ ಕರೇಂಗೆ’ ಅಂದರೆ ಸ್ಥಾನದ ಮೇಲೆ ಬಾವ ಕಣ್ಣಿಟ್ಟಿದ್ದಾರೆ ರಾಹುಲ್​ ಗಾಂಧಿ ಏನು ಮಾಡ್ತಾರೆ ಎನ್ನುವ ಅರ್ಥವನ್ನು ನೀಡುವಂತೆ ಸ್ಮೃತಿ ಹೇಳಿದ್ದಾರೆ.

ಬಸ್​ಗಳಲ್ಲಿ ಪ್ರಯಾಣಿಸುವ ಮುನ್ನ ಕರವಸ್ತ್ರವನ್ನು ಹಾಕಿ ಸೀಟು ಹಿಡಿಯುವ ಕಾಲವೊಂದಿತ್ತು. ಈಗ ರಾಬರ್ಟ್​ ವಾದ್ರಾ ಆ ಸೀಟಿನ ಮೇಲೆ ಕಣ್ಣೀಟ್ಟಿರುವ ಕಾರಣ ಆ ಆಸನದ ಮೇಲೆ ಯಾರಿಗೂ ಕೂರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ರಾಬರ್ಟ್​ ವಾದ್ರಾ 2019ರಲ್ಲಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಬಹುದು ಎನ್ನುವ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲಿ ಸ್ಮೃತಿ ಈ ಹೇಳಿಕೆ ನೀಡಿದ್ದಾರೆ. ಮೇ 20ರಂದು ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಅಮೇಥಿಯಲ್ಲಿ ಮತದಾನ ನಡೆಯಲಿದೆ.

ಮತ್ತಷ್ಟು ಓದಿ: ಅಮೇಠಿ ರೈತರನ್ನು ಲೂಟಿ ಮಾಡಿದ ಗಾಂಧಿ ಕುಟುಂಬ, 600 ರೂ.ಗೆ 30 ಎಕರೆ ಭೂಮಿ ತೆಗೆದುಕೊಂಡರು: ಸ್ಮೃತಿ ಇರಾನಿ ಕಿಡಿಕಿಡಿ

ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಐದು ವರ್ಷಗಳಲ್ಲಿ ಏನು ಮಾಡಬಲ್ಲೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ಕೂಡ ಅವರಿಗೆ ಕಷ್ಟವಾಗುತ್ತಿರುವಂತಿದೆ. 2019ರ ಚುನಾವಣೆಯಲ್ಲಿ ರಾಹುಲ್​ ಗಾಂಧಿಯನ್ನು ಸೋಲಿಸುವ ಮೊದಲು ಮೂರು ಬಾರಿ ಸತತವಾಗಿ ಅವರು ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಾಂದಿ, ರಾಜೀವ್ ಗಾಂಧಿ, ಸಂಜಯ್​ ಗಾಂಧಿ ಕೂಡ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದನ್ನು ಕಾಂಗ್ರೆಸ್​ನ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು.

ಕೇರಳದ ವಯನಾಡಿನಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಮೇಥಿಯಿಂದಲೂ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು, ಆಗ ಪ್ರತಿಕ್ರಿಯಿಸಿದ್ದ ರಾಹುಲ್ ಪಕ್ಷ ಏನು ಹೇಳುತ್ತದೋ ಹಾಗೆ ಕೇಳುತ್ತೇನೆ ಎಂದಿದ್ದರು. ವಯನಾಡಿನಲ್ಲಿ ಏಪ್ರಿಲ್​ 26ರಂದು ಮತದಾನ ನಡೆಯಲಿದ್ದು, ಅದಾದ ಬಳಿಕ ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದರ ಬಗ್ಗೆ ತಿಳಿಸಬಹುದು ಎನ್ನುವ ಊಹಾಪೋಹಗಳು ಶುರುವಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್