AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ

ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಕುಟುಂಬದ ಎರಡು ತಲೆಮಾರಿನವರು ಬಾಬರಿ ಮಸೀದಿಗಾಗಿ ಹಿಂದೂಗಳ ವಿರುದ್ಧ ನ್ಯಾಯಾಲಯದಲ್ಲಿ ಶತಮಾನಗಳ ಕಾಲ ಹೋರಾಟ ನಡೆಸಿದರು. ಆದರೆ ಸುಪ್ರೀಂ ಕೋರ್ಟ್ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗ ಅವರು ಸಂತೋಷದಿಂದ ಸ್ವಾಗತಿಸಿದರು. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು ಆದರೆ ಕಾಂಗ್ರೆಸ್​ನ ನಾಯಕರು ಮಾತ್ರ ಆಗಮಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. 

ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ
ಪ್ರಧಾನಿ ಮೋದಿ
TV9 Web
| Edited By: |

Updated on:Apr 19, 2024 | 9:22 PM

Share

ಬಾಬ್ರಿ ಮಸೀದಿ ಪರ ಅಂದು ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಲ್ಲಿ ಒಬ್ಬರಾದ ಇಕ್ಬಾಲ್ ಅನ್ಸಾರಿ (Iqbal Ansari) ಮತ್ತು ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಾಡಿಹೊಗಳಿದ್ದಾರೆ. ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಕುಟುಂಬದ ಎರಡು ತಲೆಮಾರಿನವರು ಬಾಬರಿ ಮಸೀದಿಗಾಗಿ ಹಿಂದೂಗಳ ವಿರುದ್ಧ ನ್ಯಾಯಾಲಯದಲ್ಲಿ ಶತಮಾನಗಳ ಕಾಲ ಹೋರಾಟ ನಡೆಸಿದರು. ಆದರೆ ಸುಪ್ರೀಂ ಕೋರ್ಟ್ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗ ಅವರು ಸಂತೋಷದಿಂದ ಸ್ವಾಗತಿಸಿದರು. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು ಆದರೆ ಕಾಂಗ್ರೆಸ್​ನ ನಾಯಕರು ಮಾತ್ರ ಆಗಮಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಶತಮಾನಗಳ ಕಾಲ ಹಿಂದೂಗಳ ವಿರುದ್ಧ ಹೋರಾಟ ಮಾಡಿದ್ದ ಇಕ್ಬಾಲ್ ಅನ್ಸಾರಿ ಮತ್ತು ಅವರ ಕುಟುಂಬಕ್ಕೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ನೀಡಲಾಗಿತ್ತು. ಅಷ್ಟೇ ಅಲ್ಲದೆ ಆಹ್ವಾನ ಸ್ವೀಕರಿಸಿದ್ದ ಇಕ್ಬಾಲ್ ಅನ್ಸಾರಿ ಅವರು ರಾಮಮಂದಿರ ಕಾರ್ಯಕ್ರಮಕ್ಕೆ ಸ್ವತಃ ಹಾಜರಾಗಿದ್ದರು. ಆ ಮೂಲಕ ಅವರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಒಪ್ಪಿಕೊಂಡಿದ್ದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

ಇಕ್ಬಾಲ್ ಅನ್ಸಾರಿ ಅವರಿಗೆ ಆಹ್ವಾನ ನೀಡಿದಂತೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಭಾರತ ಮೈತ್ರಿಕೂಟದ ನಾಯಕರಿಗೂ ರಾಮಮಂದಿರ ಟ್ರಸ್ಟ್‌ನಿಂದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನ ನೀಡಲಾಗಿತ್ತು. ಜೀವನಪರ್ಯಾಂತ ಬಾಬರಿ ಮಸೀದಿಗಾಗಿ ಹೋರಾಡಿದವರೇ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್​ನ ನಾಯಕರು ಮಾತ್ರ ಬರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಬಂದಿದ್ದ ಕಾಂಗ್ರೆಸ್​ ನಾಯಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ: ಪ್ರಧಾನಿ ಮೋದಿ

ಕಾಂಗ್ರೆಸ್‌ಗೆ ತಾನು ಚುನಾವಣೆಯಲ್ಲಿ ಗೆಲ್ಲಲ್ಲುವುದಿಲ್ಲ ಎಂದು ತಿಳಿದಿದೆ. ಆದ್ದರಿಂದ ಚುನಾವಣಾ ಫಲಿತಾಂಶದ ನಂತರ ದೇಶವು ಹೊತ್ತಿ ಉರಿಯುತ್ತದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Fri, 19 April 24

ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್