AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಅಶಿಸ್ತಿನ ವರ್ತನೆಗಾಗಿ ಮಾನ್ಸೂನ್ ಅಧಿವೇಶನದ ಮುಂದಿನ ಕಲಾಪಗಳಿಗೆ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಲೋಕಸಭೆ ಅಮಾನತು ಮಾಡಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ, 2023 ರ ಚರ್ಚೆಯಲ್ಲಿ ಅವರು ಸದನದ ಅಂಗಳಕ್ಕೆ ಹೋಗಿ ಅಧ್ಯಕ್ಷರ ಮೇಲೆ ಕಾಗದಗಳನ್ನು ಎಸೆದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ
ಲೋಕಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 03, 2023 | 8:38 PM

Share

ದೆಹಲಿ ಆಗಸ್ಟ್ 03: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ (Delhi Ordinance Bill) ಅಥವಾ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ (Lok Sabha) ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ನಾಲ್ಕು ಗಂಟೆಗಳ ಅವಧಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಲ್ಲಾ ಸಂಸದರಿಗೆ ಉತ್ತರಿಸಿದರು.

ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕೈಜೋಡಿಸಿರುವ ವಿರೋಧ ಪಕ್ಷದ ಮೈತ್ರಿ ಇಂಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಮಸೂದೆ ಅಂಗೀಕಾರವಾದರೆ ಪ್ರತಿಪಕ್ಷಗಳ ಮೈತ್ರಿ ಕುಸಿಯುತ್ತದೆ ಎಂದು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳು ಮತ್ತು ದೆಹಲಿಯಲ್ಲಿ ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ, ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ನಿಯಮಗಳನ್ನು ರೂಪಿಸುವ ಸಂಪೂರ್ಣ ಹಕ್ಕು ಕೇಂದ್ರಕ್ಕೆ ಇದೆ ಎಂದಿದ್ದಾರೆ ಕೇಂದ್ರ ಗೃಹ ಸಚಿವರು.

ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, 2023, ನಗರ ಸರ್ಕಾರದಲ್ಲಿ ಹಿರಿಯ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳನ್ನು ನಿರ್ವಹಿಸಲು ಹೊರಡಿಸಲಾದ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಮಂಡಿಸುವ ಹೊತ್ತಲ್ಲಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿವೆ

ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತು

ಅಶಿಸ್ತಿನ ವರ್ತನೆಗಾಗಿ ಮಾನ್ಸೂನ್ ಅಧಿವೇಶನದ ಮುಂದಿನ ಕಲಾಪಗಳಿಗೆ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಲೋಕಸಭೆ ಅಮಾನತು ಮಾಡಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ, 2023 ರ ಚರ್ಚೆಯಲ್ಲಿ ಅವರು ಸದನದ ಅಂಗಳಕ್ಕೆ ಹೋಗಿ ಅಧ್ಯಕ್ಷರ ಮೇಲೆ ಕಾಗದಗಳನ್ನು ಎಸೆದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿ ಬಗ್ಗೆ ಯೋಚಿಸಿ, ಮೈತ್ರಿ ಬಗ್ಗೆ ಅಲ್ಲ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

ಪ್ರತಿಪಕ್ಷಗಳಿಗೆ ನಾಚಿಕೆಯಾಗಬೇಕು. ಅವರಿಗೆ ಮತ ಚಲಾಯಿಸುವ ಧೈರ್ಯವಿಲ್ಲ, ಆದ್ದರಿಂದ ಅವರು ಮತದಾನದಲ್ಲಿ ಭಾಗವಹಿಸಲಿಲ್ಲ. ಅವರು ಒಂಬತ್ತು ಮಸೂದೆಗಳನ್ನು ಚರ್ಚಿಸಲಿಲ್ಲ ಆದರೆ ಅವರು ತಮ್ಮ ಮೈತ್ರಿಯನ್ನು ರಕ್ಷಿಸಲು ಈ ಮಸೂದೆಯನ್ನು ಚರ್ಚಿಸಲು ಬಂದರು. ಈ ಮಸೂದೆಯನ್ನು ವಿರೋಧಿಸಿ ಅವರು ಆದರೆ ಹೊರನಡೆದಿದ್ದಾರೆ. ದೆಹಲಿ ಸರ್ಕಾರವನ್ನು ಬೆಂಬಲಿಸಿದ ಕಾಂಗ್ರೆಸ್ ಮತದಾನದಲ್ಲಿ ಭಾಗವಹಿಸಲಿಲ್ಲ, ನೀವು ಹೊರನಡೆದರೆ ನೀವು ಮಸೂದೆಯನ್ನು ಬೆಂಬಲಿಸುತ್ತೀರಿ ಎಂದರ್ಥ. ಇಲ್ಲದಿದ್ದರೆ ನೀವು ಅದರ ವಿರುದ್ಧ ಮತ ಚಲಾಯಿಸುತ್ತೀರಿ ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು