AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಅಶಿಸ್ತಿನ ವರ್ತನೆಗಾಗಿ ಮಾನ್ಸೂನ್ ಅಧಿವೇಶನದ ಮುಂದಿನ ಕಲಾಪಗಳಿಗೆ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಲೋಕಸಭೆ ಅಮಾನತು ಮಾಡಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ, 2023 ರ ಚರ್ಚೆಯಲ್ಲಿ ಅವರು ಸದನದ ಅಂಗಳಕ್ಕೆ ಹೋಗಿ ಅಧ್ಯಕ್ಷರ ಮೇಲೆ ಕಾಗದಗಳನ್ನು ಎಸೆದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ
ಲೋಕಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 03, 2023 | 8:38 PM

Share

ದೆಹಲಿ ಆಗಸ್ಟ್ 03: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ (Delhi Ordinance Bill) ಅಥವಾ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ (Lok Sabha) ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ನಾಲ್ಕು ಗಂಟೆಗಳ ಅವಧಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಲ್ಲಾ ಸಂಸದರಿಗೆ ಉತ್ತರಿಸಿದರು.

ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕೈಜೋಡಿಸಿರುವ ವಿರೋಧ ಪಕ್ಷದ ಮೈತ್ರಿ ಇಂಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಮಸೂದೆ ಅಂಗೀಕಾರವಾದರೆ ಪ್ರತಿಪಕ್ಷಗಳ ಮೈತ್ರಿ ಕುಸಿಯುತ್ತದೆ ಎಂದು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳು ಮತ್ತು ದೆಹಲಿಯಲ್ಲಿ ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ, ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ನಿಯಮಗಳನ್ನು ರೂಪಿಸುವ ಸಂಪೂರ್ಣ ಹಕ್ಕು ಕೇಂದ್ರಕ್ಕೆ ಇದೆ ಎಂದಿದ್ದಾರೆ ಕೇಂದ್ರ ಗೃಹ ಸಚಿವರು.

ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, 2023, ನಗರ ಸರ್ಕಾರದಲ್ಲಿ ಹಿರಿಯ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳನ್ನು ನಿರ್ವಹಿಸಲು ಹೊರಡಿಸಲಾದ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಮಂಡಿಸುವ ಹೊತ್ತಲ್ಲಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿವೆ

ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತು

ಅಶಿಸ್ತಿನ ವರ್ತನೆಗಾಗಿ ಮಾನ್ಸೂನ್ ಅಧಿವೇಶನದ ಮುಂದಿನ ಕಲಾಪಗಳಿಗೆ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಲೋಕಸಭೆ ಅಮಾನತು ಮಾಡಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ, 2023 ರ ಚರ್ಚೆಯಲ್ಲಿ ಅವರು ಸದನದ ಅಂಗಳಕ್ಕೆ ಹೋಗಿ ಅಧ್ಯಕ್ಷರ ಮೇಲೆ ಕಾಗದಗಳನ್ನು ಎಸೆದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿ ಬಗ್ಗೆ ಯೋಚಿಸಿ, ಮೈತ್ರಿ ಬಗ್ಗೆ ಅಲ್ಲ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

ಪ್ರತಿಪಕ್ಷಗಳಿಗೆ ನಾಚಿಕೆಯಾಗಬೇಕು. ಅವರಿಗೆ ಮತ ಚಲಾಯಿಸುವ ಧೈರ್ಯವಿಲ್ಲ, ಆದ್ದರಿಂದ ಅವರು ಮತದಾನದಲ್ಲಿ ಭಾಗವಹಿಸಲಿಲ್ಲ. ಅವರು ಒಂಬತ್ತು ಮಸೂದೆಗಳನ್ನು ಚರ್ಚಿಸಲಿಲ್ಲ ಆದರೆ ಅವರು ತಮ್ಮ ಮೈತ್ರಿಯನ್ನು ರಕ್ಷಿಸಲು ಈ ಮಸೂದೆಯನ್ನು ಚರ್ಚಿಸಲು ಬಂದರು. ಈ ಮಸೂದೆಯನ್ನು ವಿರೋಧಿಸಿ ಅವರು ಆದರೆ ಹೊರನಡೆದಿದ್ದಾರೆ. ದೆಹಲಿ ಸರ್ಕಾರವನ್ನು ಬೆಂಬಲಿಸಿದ ಕಾಂಗ್ರೆಸ್ ಮತದಾನದಲ್ಲಿ ಭಾಗವಹಿಸಲಿಲ್ಲ, ನೀವು ಹೊರನಡೆದರೆ ನೀವು ಮಸೂದೆಯನ್ನು ಬೆಂಬಲಿಸುತ್ತೀರಿ ಎಂದರ್ಥ. ಇಲ್ಲದಿದ್ದರೆ ನೀವು ಅದರ ವಿರುದ್ಧ ಮತ ಚಲಾಯಿಸುತ್ತೀರಿ ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ