ಲೋಕಸಭೆಯಲ್ಲಿ ಸಂಸದರ ಪ್ರಮಾಣವಚನ ನಿಯಮದಲ್ಲಿ ತಿದ್ದುಪಡಿ, ಘೋಷಣೆಗಳಿಗೆ ನಿರ್ಬಂಧ

ಇತ್ತೀಚೆಗೆ ಲೋಕಸಭೆಯಲ್ಲಿ ನೂತನವಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಕೂಗಿದ್ದ ಘೋಷಣೆಗಳನ್ನು ಗಮನದಲ್ಲಿಟ್ಟುಕೊಂಡು ಸ್ಪೀಕರ್ ಓಂ ಬಿರ್ಲಾ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ನಿರ್ಧಾರದ ಅಡಿಯಲ್ಲಿ, ಅವರು ನಿಯಮವನ್ನು ತಿದ್ದುಪಡಿ ಮಾಡಿದ್ದಾರೆ ಮತ್ತು ಚುನಾಯಿತ ಸಂಸದರು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಸದರ ಪ್ರಮಾಣವಚನ ನಿಯಮದಲ್ಲಿ ತಿದ್ದುಪಡಿ, ಘೋಷಣೆಗಳಿಗೆ ನಿರ್ಬಂಧ
ಓಂ ಬಿರ್ಲಾ
Follow us
|

Updated on: Jul 04, 2024 | 2:01 PM

18 ನೇ ಲೋಕಸಭೆ(Lok Sabha)ಯಲ್ಲಿ ಸಂಸತ್ತಿನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ, ಸ್ಪೀಕರ್ ಓಂ ಬಿರ್ಲಾ(Om Birla) ಅವರು ಪ್ರಮಾಣ ವಚನಕ್ಕೆ ಸಂಬಂಧಿಸಿದ ನಿಯಮಗಳನ್ನು ತಿದ್ದುಪಡಿ ಮಾಡಿದ್ದಾರೆ. ಸದಸ್ಯರು ಪ್ರಮಾಣವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ, ಕೆಳಮನೆಯ ಕಾರ್ಯಚಟುವಟಿಕೆಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ನಿಯಂತ್ರಿಸಲು ಹೊಸ ಷರತ್ತು ಸೇರಿಸಲಾಯಿತು, ಇವುಗಳನ್ನು ನಿಯಮಗಳಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿಲ್ಲ.

ಕಳೆದ ವಾರ ಸಂಸದರು ಪ್ರಮಾಣವಚನ ಸ್ವೀಕರಿಸುವಾಗ ಕೆಲವರು ಜೈ ಹಿಂದೂ ರಾಷ್ಟ್ರ, ಜೈ ಸಂವಿಧಾನ ಎಂದು ಘೋಷಿಸಿದರೆ, ಅಸಾದುದ್ದೀನ್ ಓವೈಸಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ್ದರು, ಇದಕ್ಕೆ ಹಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದೆ.

ಹೊಸದಾಗಿ ಚುನಾಯಿತರಾದ ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸುವ ಪವಿತ್ರ ಸಂದರ್ಭವನ್ನು ರಾಜಕೀಯ ಸಂದೇಶ ರವಾನಿಸಲು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಮತ್ತಷ್ಟು ಓದಿ:ಲೋಕಸಭೆಯ ಮೊದಲ ಅಧಿವೇಶನದಲ್ಲಿ ಉತ್ಪಾದಕತೆ ಶೇ 103 : ಸ್ಪೀಕರ್ ಓಂ ಬಿರ್ಲಾ

ಇಂತಹ ಘೋಷಣೆಗಳಿಂದಾಗಿ ಜೂನ್ 24 ಮತ್ತು 25 ರಂದು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಹೊರಬಿದ್ದಿದ್ದು, ಎನ್​ಡಿಎ ಬಹುಮತ ಪಡೆದು, ಮಿತ್ರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಓಂ ಬಿರ್ಲಾ ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ