AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ
ಶಶಿಕಲಾImage Credit source: Outlook
ನಯನಾ ರಾಜೀವ್
|

Updated on: Sep 05, 2023 | 10:33 AM

Share

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್(Sasikala Natarajan) ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು, ಕಾರಾಗೃಹ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್​ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದೆ.

ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವಿಡಿಯೋಗಳು ಭಾರೀ ಆಘಾತವನ್ನುಂಟು ಮಾಡಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ ಶಶಿಕಲಾ ಹಾಜರಾಗಿರಲಿಲ್ಲ. ಈ ವೇಳೆ ಶಶಿಕಲಾ ಕಡೆಯವರು ವೈಟಾ ಮುಂದೆ ಮಾತ್ರ ಹಾಜರಾಗಿದ್ದರು. ಉಳಿದ ಯಾವುದೇ ವಿಚಾರಣೆಗೆ ಶಶಿಕಲಾ ಮತ್ತು ಇಳವರಸಿ ಹಾಜರಾಗಿರಲಿಲ್ಲ.

ಇದರ ಬೆನ್ನಲ್ಲೇ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಶಶಿಕಲಾ ಹಾಗೂ ಇಳವರಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರೆಂಟ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜಾಮೀನಿಗೆ ಸಹಿ ಹಾಕಿದ ವ್ಯಕ್ತಿಗಳಿಗೂ ಲೋಕಾಯುಕ್ತ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More