AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ
ಶಶಿಕಲಾImage Credit source: Outlook
ನಯನಾ ರಾಜೀವ್
|

Updated on: Sep 05, 2023 | 10:33 AM

Share

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್(Sasikala Natarajan) ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು, ಕಾರಾಗೃಹ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್​ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದೆ.

ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವಿಡಿಯೋಗಳು ಭಾರೀ ಆಘಾತವನ್ನುಂಟು ಮಾಡಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ ಶಶಿಕಲಾ ಹಾಜರಾಗಿರಲಿಲ್ಲ. ಈ ವೇಳೆ ಶಶಿಕಲಾ ಕಡೆಯವರು ವೈಟಾ ಮುಂದೆ ಮಾತ್ರ ಹಾಜರಾಗಿದ್ದರು. ಉಳಿದ ಯಾವುದೇ ವಿಚಾರಣೆಗೆ ಶಶಿಕಲಾ ಮತ್ತು ಇಳವರಸಿ ಹಾಜರಾಗಿರಲಿಲ್ಲ.

ಇದರ ಬೆನ್ನಲ್ಲೇ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಶಶಿಕಲಾ ಹಾಗೂ ಇಳವರಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರೆಂಟ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜಾಮೀನಿಗೆ ಸಹಿ ಹಾಕಿದ ವ್ಯಕ್ತಿಗಳಿಗೂ ಲೋಕಾಯುಕ್ತ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?