AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ
ಶಶಿಕಲಾImage Credit source: Outlook
ನಯನಾ ರಾಜೀವ್
|

Updated on: Sep 05, 2023 | 10:33 AM

Share

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್(Sasikala Natarajan) ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು, ಕಾರಾಗೃಹ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್​ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದೆ.

ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವಿಡಿಯೋಗಳು ಭಾರೀ ಆಘಾತವನ್ನುಂಟು ಮಾಡಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ ಶಶಿಕಲಾ ಹಾಜರಾಗಿರಲಿಲ್ಲ. ಈ ವೇಳೆ ಶಶಿಕಲಾ ಕಡೆಯವರು ವೈಟಾ ಮುಂದೆ ಮಾತ್ರ ಹಾಜರಾಗಿದ್ದರು. ಉಳಿದ ಯಾವುದೇ ವಿಚಾರಣೆಗೆ ಶಶಿಕಲಾ ಮತ್ತು ಇಳವರಸಿ ಹಾಜರಾಗಿರಲಿಲ್ಲ.

ಇದರ ಬೆನ್ನಲ್ಲೇ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಶಶಿಕಲಾ ಹಾಗೂ ಇಳವರಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರೆಂಟ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜಾಮೀನಿಗೆ ಸಹಿ ಹಾಕಿದ ವ್ಯಕ್ತಿಗಳಿಗೂ ಲೋಕಾಯುಕ್ತ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!