AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಒಂದೆಡೆ ಮದ್ಯ ಇನ್ನೊಂದೆಡೆ ಕರ್ಕಶವಾದ ಸಂಗೀತ ಅದರ ಮಧ್ಯೆ ಎಲ್​ಇಡಿ ಪರದೆ ಮೇಲೆ ಈಶ್ವರನ ಚಿತ್ರವಿಟ್ಟಿದ್ದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೀಗ ವಿವಾದ ಭುಗಿಲೆದ್ದಿದೆ. ಡಿಸೆಂಬರ್ 28 ರಿಂದ ಗೋವಾದಲ್ಲಿ ಆರಂಭವಾದ ಸನ್​ ಬರ್ನ್​ ಫೆಸ್ಟಿವಲ್(Sunburn Festival)​ ಇಂದು ಕೊನೆಗೊಳ್ಳುತ್ತಿದೆ.

ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್
ಸನ್​ ಬರ್ನ್​ ಫೆಸ್ಟಿವಲ್
ನಯನಾ ರಾಜೀವ್
|

Updated on: Dec 31, 2023 | 9:07 AM

Share

ಒಂದೆಡೆ ಮದ್ಯ ಇನ್ನೊಂದೆಡೆ ಕರ್ಕಶವಾದ ಸಂಗೀತ ಅದರ ಮಧ್ಯೆ ಎಲ್​ಇಡಿ ಪರದೆ ಮೇಲೆ ಈಶ್ವರನ ಚಿತ್ರವಿಟ್ಟಿದ್ದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೀಗ ವಿವಾದ ಭುಗಿಲೆದ್ದಿದೆ. ಡಿಸೆಂಬರ್ 28 ರಿಂದ ಗೋವಾದಲ್ಲಿ ಆರಂಭವಾದ ಸನ್​ ಬರ್ನ್​ ಫೆಸ್ಟಿವಲ್(Sunburn Festival)​ ಇಂದು ಕೊನೆಗೊಳ್ಳುತ್ತಿದೆ.

ಆಮ್ ಆದ್ಮಿ ಪಕ್ಷದ ಗೋವಾ ಅಧ್ಯಕ್ಷ ಅಮಿತ್ ಪಾಲೇಕರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಸನ್​ ಬರ್ನ್​ ಫೆಸ್ಟಿವಲ್​ನಲ್ಲಿ ನೃತ್ಯ, ಸಂಗೀತ, ಮದ್ಯದ ಮಧ್ಯೆ ಶಿವನ ಚಿತ್ರವನ್ನು ಇರಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಸನಾತನ ಧರ್ಮಕ್ಕೆ ಧಕ್ಕೆಯಾದಂತಾಗಿದೆ ಎಂದಿದ್ದಾರೆ.

ಸನಾತನ ಧರ್ಮದ ಸಮಗ್ರತೆಗೆ ಧಕ್ಕೆ ಉಂಟಾಗಿರುವುದರಿಂದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಎಪಿ ನಾಯಕ ಒತ್ತಾಯಿಸಿದ್ದಾರೆ. ಸನ್ ಬರ್ನ್ ಇಡಿಎಂ ಉತ್ಸವದ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಶುಕ್ರವಾರ ರಾತ್ರಿ ಸನ್‌ಬರ್ನ್ ಆಯೋಜಕರ ವಿರುದ್ಧ ಕಾಂಗ್ರೆಸ್ ಮುಖಂಡ ವಿಜಯ್ ಭಿಕೆ ಮಾಪುಸಾದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಭಿಕೆ ದೂರಿನಲ್ಲಿ ತಿಳಿಸಿದ್ದಾರೆ. 25 ಲಕ್ಷ ಮೌಲ್ಯದ ಮೊಬೈಲ್​ ಫೋನ್​ಗಳ ಕಳ್ಳತನವಾಗಿದೆ. ನಿವಾರದಂದು ಗೋವಾ ಪೊಲೀಸರು ಗ್ಯಾಂಗ್‌ನ ಏಳು ಸದಸ್ಯರನ್ನು ಬಂಧಿಸಿದ್ದಾರೆ, ಇವರೆಲ್ಲರೂ ಕದಿಯುವ ದೃಷ್ಟಿಯಿಂದಲೇ ಮುಂಬೈನಿಂದ ಬಂದಿದ್ದರು ಎನ್ನಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ನಡೆಯಬೇಕಿದ್ದ ಸನ್​ ಬರ್ನ್​ ಫೆಸ್ಟಿವಲ್ ರದ್ದು

ಈ ಸಂದರ್ಭದಲ್ಲಿ ಆರೋಪಿಗಳ ಕದ್ದ 29 ಮೊಬೈಲ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್​ ಉಪ ವರಿಷ್ಠಾಧಿಕಾರಿ ಜಿವ್ಬಾ ದಳವಿ ತಿಳಿಸಿದ್ದಾರೆ.

ಇಂತಹ ಕೃತ್ಯಗಳು ನಡೆಯಬಹುದು ಎಂದು ಪೊಲೀಸರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು. ಹಾಗಾಗಿ ಪೊಲೀಸರು ಸಾಮಾನ್ಯ ಉಡುಪಿನಲ್ಲಿ ತೆರಳಿದ್ದರು. ಅಷ್ಟೇ ಅಲ್ಲದೆ 82 ಲಕ್ಷ ಮೌಲ್ಯದ ಪಾಸ್​ಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ ಐವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!