AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್

ಒಂದೆಡೆ ಮದ್ಯ ಇನ್ನೊಂದೆಡೆ ಕರ್ಕಶವಾದ ಸಂಗೀತ ಅದರ ಮಧ್ಯೆ ಎಲ್​ಇಡಿ ಪರದೆ ಮೇಲೆ ಈಶ್ವರನ ಚಿತ್ರವಿಟ್ಟಿದ್ದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೀಗ ವಿವಾದ ಭುಗಿಲೆದ್ದಿದೆ. ಡಿಸೆಂಬರ್ 28 ರಿಂದ ಗೋವಾದಲ್ಲಿ ಆರಂಭವಾದ ಸನ್​ ಬರ್ನ್​ ಫೆಸ್ಟಿವಲ್(Sunburn Festival)​ ಇಂದು ಕೊನೆಗೊಳ್ಳುತ್ತಿದೆ.

ಮದ್ಯ, ಕರ್ಕಶ ಸಂಗೀತ, ಜತೆಗೆ ಈಶ್ವರನ ಚಿತ್ರ: ವಿವಾದ ಹುಟ್ಟುಹಾಕಿದ ಗೋವಾ ಸನ್​ ಬರ್ನ್​ ಫೆಸ್ಟಿವಲ್
ಸನ್​ ಬರ್ನ್​ ಫೆಸ್ಟಿವಲ್
Follow us
ನಯನಾ ರಾಜೀವ್
|

Updated on: Dec 31, 2023 | 9:07 AM

ಒಂದೆಡೆ ಮದ್ಯ ಇನ್ನೊಂದೆಡೆ ಕರ್ಕಶವಾದ ಸಂಗೀತ ಅದರ ಮಧ್ಯೆ ಎಲ್​ಇಡಿ ಪರದೆ ಮೇಲೆ ಈಶ್ವರನ ಚಿತ್ರವಿಟ್ಟಿದ್ದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೀಗ ವಿವಾದ ಭುಗಿಲೆದ್ದಿದೆ. ಡಿಸೆಂಬರ್ 28 ರಿಂದ ಗೋವಾದಲ್ಲಿ ಆರಂಭವಾದ ಸನ್​ ಬರ್ನ್​ ಫೆಸ್ಟಿವಲ್(Sunburn Festival)​ ಇಂದು ಕೊನೆಗೊಳ್ಳುತ್ತಿದೆ.

ಆಮ್ ಆದ್ಮಿ ಪಕ್ಷದ ಗೋವಾ ಅಧ್ಯಕ್ಷ ಅಮಿತ್ ಪಾಲೇಕರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಸನ್​ ಬರ್ನ್​ ಫೆಸ್ಟಿವಲ್​ನಲ್ಲಿ ನೃತ್ಯ, ಸಂಗೀತ, ಮದ್ಯದ ಮಧ್ಯೆ ಶಿವನ ಚಿತ್ರವನ್ನು ಇರಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಸನಾತನ ಧರ್ಮಕ್ಕೆ ಧಕ್ಕೆಯಾದಂತಾಗಿದೆ ಎಂದಿದ್ದಾರೆ.

ಸನಾತನ ಧರ್ಮದ ಸಮಗ್ರತೆಗೆ ಧಕ್ಕೆ ಉಂಟಾಗಿರುವುದರಿಂದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಎಪಿ ನಾಯಕ ಒತ್ತಾಯಿಸಿದ್ದಾರೆ. ಸನ್ ಬರ್ನ್ ಇಡಿಎಂ ಉತ್ಸವದ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಶುಕ್ರವಾರ ರಾತ್ರಿ ಸನ್‌ಬರ್ನ್ ಆಯೋಜಕರ ವಿರುದ್ಧ ಕಾಂಗ್ರೆಸ್ ಮುಖಂಡ ವಿಜಯ್ ಭಿಕೆ ಮಾಪುಸಾದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಭಿಕೆ ದೂರಿನಲ್ಲಿ ತಿಳಿಸಿದ್ದಾರೆ. 25 ಲಕ್ಷ ಮೌಲ್ಯದ ಮೊಬೈಲ್​ ಫೋನ್​ಗಳ ಕಳ್ಳತನವಾಗಿದೆ. ನಿವಾರದಂದು ಗೋವಾ ಪೊಲೀಸರು ಗ್ಯಾಂಗ್‌ನ ಏಳು ಸದಸ್ಯರನ್ನು ಬಂಧಿಸಿದ್ದಾರೆ, ಇವರೆಲ್ಲರೂ ಕದಿಯುವ ದೃಷ್ಟಿಯಿಂದಲೇ ಮುಂಬೈನಿಂದ ಬಂದಿದ್ದರು ಎನ್ನಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ನಡೆಯಬೇಕಿದ್ದ ಸನ್​ ಬರ್ನ್​ ಫೆಸ್ಟಿವಲ್ ರದ್ದು

ಈ ಸಂದರ್ಭದಲ್ಲಿ ಆರೋಪಿಗಳ ಕದ್ದ 29 ಮೊಬೈಲ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್​ ಉಪ ವರಿಷ್ಠಾಧಿಕಾರಿ ಜಿವ್ಬಾ ದಳವಿ ತಿಳಿಸಿದ್ದಾರೆ.

ಇಂತಹ ಕೃತ್ಯಗಳು ನಡೆಯಬಹುದು ಎಂದು ಪೊಲೀಸರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು. ಹಾಗಾಗಿ ಪೊಲೀಸರು ಸಾಮಾನ್ಯ ಉಡುಪಿನಲ್ಲಿ ತೆರಳಿದ್ದರು. ಅಷ್ಟೇ ಅಲ್ಲದೆ 82 ಲಕ್ಷ ಮೌಲ್ಯದ ಪಾಸ್​ಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ ಐವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ