AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ತಾರಸಿಯಲ್ಲಿ ನಿಂತು ಹಿಂದೂಗಳ ಮೆರವಣಿಗೆ ಮೇಲೆ ಉಗುಳಿದ್ದ ಮುಸ್ಲಿಂ ಯುವಕ ಮನೆಯನ್ನೇ ಕಳೆದುಕೊಂಡ

ಮನೆಯ ತಾರಸಿಯಲ್ಲಿ ನಿಂತು  ಹಿಂದೂ ಧಾರ್ಮಿಕ ಮೆರವಣಿಗೆಯ ಮೇಲೆ ಎಂಜಿಲು ಉಗುಳಿದ್ದ ಮುಸ್ಲಿಂ ಯುವಕ ಈಗ ಮನೆಯನ್ನೂ ಕಳೆದುಕೊಂಡಿದ್ದಾನೆ. ಉಜ್ಜಿಯಿನಿಯಲ್ಲಿ ನಡೆಯುತ್ತಿದ್ದ ಹಿಂದೂ ಮೆರವಣಿಗೆಯ ಮೇಲೆ ಯುವಕ ಅದ್ನಾನ್ ಮನ್ಸೂರಿ ಉಗುಳಿದ್ದ.

ಮನೆಯ ತಾರಸಿಯಲ್ಲಿ ನಿಂತು ಹಿಂದೂಗಳ ಮೆರವಣಿಗೆ ಮೇಲೆ ಉಗುಳಿದ್ದ ಮುಸ್ಲಿಂ ಯುವಕ ಮನೆಯನ್ನೇ ಕಳೆದುಕೊಂಡ
Image Credit source: NDTV
ನಯನಾ ರಾಜೀವ್
|

Updated on: Jan 18, 2024 | 3:07 PM

Share

ಮನೆಯ ತಾರಸಿಯಲ್ಲಿ ನಿಂತು  ಹಿಂದೂ ಧಾರ್ಮಿಕ ಮೆರವಣಿಗೆಯ ಮೇಲೆ ಎಂಜಿಲು ಉಗುಳಿದ್ದ ಮುಸ್ಲಿಂ ಯುವಕ ಈಗ ಮನೆಯನ್ನೂ ಕಳೆದುಕೊಂಡಿದ್ದಾನೆ. ಉಜ್ಜಿಯಿನಿಯಲ್ಲಿ ನಡೆಯುತ್ತಿದ್ದ ಹಿಂದೂ ಮೆರವಣಿಗೆಯ ಮೇಲೆ ಯುವಕ ಅದ್ನಾನ್ ಮನ್ಸೂರಿ ಉಗುಳಿದ್ದ.

ಆತನನ್ನು 151 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು, ಘಟನೆಯ ಬಳಿಕ ಅವರ ಮನೆಯನ್ನು ಅತಿಕ್ರಮಣ ಎಂದು ಉಲ್ಲೇಖಿಸಿ ಕೆಡವಲಾಗಿದ್ದು, ಕುಟುಂಬವು ಉಳಿದುಕೊಳ್ಳಲು ಬಾಡಿಗೆ ಮನೆಯನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಐದು ತಿಂಗಳ ಜೈಲು ವಾಸ ಅನುಭವಿಸಿರುವ ಯುವಕ ಜಾಮೀನಿನ ಮೇಲೆ ಹೊರಗಿದ್ದಾನೆ. ಆತನ ಸಹೋದರ ಸೇರಿದಂತೆ ಇತರೆ ಇಬ್ಬರು ಆರೋಪಿಗಳಿಗೆ ಈ ಮೊದಲೇ ಜಾಮೀನು ನೀಡಲಾಗಿತ್ತು.

ಜುಲೈ 17 ರಂದು ಅದ್ನಾನ್ ಹಾಗೂ ಅವರ ಇಬ್ಬರು ಸಹೋದರರು ತಾರಸಿ ಮೇಲಿದ್ದರು, ಭಗವಾನ್ ಮಹಾಕಾಲ್ ಅಂದರೆ ಶಿವ ಮೆರವಣಿಗೆಯು ಅವರ ಮನೆಯ ಮುಂದೆ ಸಾಗುತ್ತಿತ್ತು. ಆದರೆ ಮೂವರು ಮೆರವಣಿಗೆಯ ಮೇಲೆ ಎಂಜಿಲು ಉಗುಳಿದ್ದರು. ಬಳಿಕ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

ಮತ್ತಷ್ಟು ಓದಿ: ಸಹಸ್ರಾರು ಜನರ ಮಧ್ಯೆ ಹಿಂದೂ ಮಹಾಗಣಪತಿ ಶೋಭಾ ಯಾತ್ರೆ: ಡಿಜೆ ಸೌಂಡಿಗೆ ಮೈಮರೆತು ಹೆಜ್ಜೆ ಹಾಕಿದ ಯುವಸಮೂಹ

ಇದೀಗ ಅವರ ಮನೆಯನ್ನು ಕೆಡವಲಾಗಿದೆ, ಸ್ಥಳೀಯ ಆಡಳಿತ ಅತಿಕ್ರಮಣ ಮಾಡಿದೆ ಎಂದು ಹೇಳಿದೆ. ಬುಲ್ಡೋಜರ್ ತೆರಳಿ ಮನೆಯನ್ನು ಕೆಡವಿತ್ತು, ಬಳಿಕ ಧ್ವನಿ ವರ್ಧಕಗಳು ಮೊಳಗಿದವು, ಡೋಲುಗಳನ್ನು ಬಾರಿಸಲಾಯಿತು, ಈ ಕುರಿತು ಬಿಜೆಪಿ ವಕ್ತಾರ ಆಶಿಶ್ ಅಗರ್ವಾಲ್ ಮಾತನಾಡಿ, ಶಿವನನ್ನು ಅವಮಾನಿಸುವವರು ಶಿವತಾಂಡವವನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ.

ಸೋಮವಾರ, ಇಂದೋರ್‌ನ ಮಧ್ಯಪ್ರದೇಶ ಹೈಕೋರ್ಟ್‌ನ ಏಕಸದಸ್ಯ ಪೀಠವು ಅದ್ನಾನ್‌ಗೆ ಜಾಮೀನು ನೀಡಿತು. ಅದ್ನಾನ್ ತಂದೆ ಮಾತನಾಡಿ, ಮಕ್ಕಳು ಹಿಂದಿರುಗಿರುವುದಕ್ಕೆ ಸಂತೋಷವಿದೆ, ನನಗೆ ಯಾರಿಂದಲೂ ಏನೂ ಬೇಡ, ಮಕ್ಕಳನ್ನು ದೋಷಮುಕ್ತಗೊಳಿಸಬೇಕು, ಏನಾಗಿದೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಲುವುದಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?