ದೆಹಲಿ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ, ಎಕ್ಸಿಟ್ ಪೋಲ್ ಫಲಿತಾಂಶ ನಂಬಲ್ಲ ಎಂದ ಆಪ್

|

Updated on: Feb 06, 2025 | 4:07 PM

ದೆಹಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಈಗಾಗಲೇ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಅದರ ಅನುಸಾರ ದೆಹಲಿಯಲ್ಲಿ ಈ ಬಾರಿ ಹ್ಯಾಟ್ರಿಕ್ ಕನಸು ಕಂಡಿದ್ದ ಆಮ್ ಆದ್ಮಿ ಪಕ್ಷದ ನಿರೀಕ್ಷೆ ಹುಸಿಯಾಗಲಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸದಲ್ಲಿದೆ. ದೆಹಲಿ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ ಅದರ ಭವಿಷ್ಯವಾಣಿಗಳನ್ನು ಎಎಪಿ ತಿರಸ್ಕರಿಸಿದೆ.

ದೆಹಲಿ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ, ಎಕ್ಸಿಟ್ ಪೋಲ್ ಫಲಿತಾಂಶ ನಂಬಲ್ಲ ಎಂದ ಆಪ್
Arvind Kejriwal Pm Modi
Follow us on

ನವದೆಹಲಿ: ಈ ಬಾರಿ ದೆಹಲಿಯಲ್ಲಿ 27 ವರ್ಷದ ಬಳಿಕ ಕಮಲ ಅರಳಲಿದೆ ಎಂದು ಬಿಜೆಪಿ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಕೂಡ ಇದೇ ಭವಿಷ್ಯವನ್ನು ನುಡಿದಿದೆ. ಆದರೆ, ಆಮ್ ಆದ್ಮಿ ಪಕ್ಷ ಈ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ನಿರಾಕರಿಸಿದೆ. ಕಾಂಗ್ರೆಸ್ ದೆಹಲಿಯಲ್ಲಿ ಖಾತೆ ತೆರೆಯುವುದು ಕೂಡ ಕಷ್ಟ ಎಂಬಂತಹ ಪರಿಸ್ಥಿತಿಯಿದೆ. ಹಲವಾರು ಸಮೀಕ್ಷಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಹೇಳಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಆದರೆ, ರಾಜಕೀಯ ಪಕ್ಷಗಳು ಎಕ್ಸಿಟ್ ಪೋಲ್ ಸಮೀಕ್ಷೆಯ ಭವಿಷ್ಯವಾಣಿಗಳಿಗೆ ಮಿಶ್ರ ಪ್ರತಿಕ್ರಿಯೆಗಳನ್ನು ಹೊರಹಾಕಿವೆ. ಕೆಲವರು ಈ ಮುನ್ಸೂಚನೆಗಳನ್ನು ಗೆಲುವಿನ ಸಂಕೇತವೆಂದು ಸ್ವೀಕರಿಸಿದರೆ, ಇತರರು ಈ ಭವಿಷ್ಯವನ್ನು ತಳ್ಳಿಹಾಕಿದ್ದು, ಇದು ಕೇವಲ ಊಹೆ ಎಂದಿದ್ದಾರೆ. ಬಿಜೆಪಿ ಈ ಬಾರಿ ದೆಹಲಿಯಲ್ಲಿ ಕಮಲ ಅರಳುತ್ತದೆ ಎಂದು ಹೇಳುವ ಮೂಲಕ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರೆ, ಎಎಪಿ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ನಿರಾಕರಿಸಿತು. ಎಎಪಿಯ ಮತದ ಪಾಲು ಯಾವಾಗಲೂ ಚುನಾವಣೋತ್ತರ ಸಮೀಕ್ಷೆಗಳಲ್ಲಿ ತೋರಿಸಿದ್ದಕ್ಕಿಂತ ಹೆಚ್ಚು ಬರುತ್ತದೆ, ಹೀಗಾಗಿ, ಈ ಬಾರಿಯೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಆಪ್ ಹೇಳಿದೆ. ಮತ್ತೊಂದೆಡೆ, ದೆಹಲಿಯ ಜನರು ಬದಲಾವಣೆಯನ್ನು ಬಯಸುತ್ತಾರೆ. ಇಲ್ಲಿನ ಜನ ಎಎಪಿಯಿಂದ ಬೇಸತ್ತಿರುವುದರಿಂದ ಕಾಂಗ್ರೆಸ್ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ಇದನ್ನೂ ಓದಿ: ಆಪ್​ಗೆ ಭಾರೀ ಹಿನ್ನಡೆ, 27 ವರ್ಷದ ಬಳಿಕ ದೆಹಲಿಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ಸಾಧ್ಯತೆ; ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟ

ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಎರಡು ಚುನಾವಣೆಗಳಲ್ಲಿ ಪಕ್ಷದ ಪ್ರದರ್ಶನವನ್ನು ನೋಡಿದರೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನದ ಪಾಲನ್ನು ಈ ಬಾರಿ ಹೆಚ್ಚಿಸುತ್ತದೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ವಿಶ್ವಾಸ ಹೊಂದಿದ್ದಾರೆ. ದೆಹಲಿ ಚುನಾವಣೆಯ ಫಲಿತಾಂಶಗಳು ಫೆಬ್ರವರಿ 8ರಂದು ಪ್ರಕಟವಾಗಲಿವೆ.

27 ವರ್ಷಗಳ ನಂತರ ಭಾರತೀಯ ಜನತಾ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಈ ಚುನಾವಣಾ ಋತುವಿನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಭಾರಿ ಹಿನ್ನಡೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಏಕೆಂದರೆ ಹೆಚ್ಚಿನ ಸಮೀಕ್ಷಾದಾರರು ರಾಜಧಾನಿಯಲ್ಲಿ ಕೇಸರಿ ಪಾಳಯವು ಮತ್ತೆ ಗೆಲುವಿನತ್ತ ಧುಮುಕಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಕಾಂಗ್ರೆಸ್ ಪಕ್ಷವು ರಾಜಧಾನಿಯಲ್ಲಿ 1 ಅಥವಾ 2 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ