AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Loudspeakers in Mosques: ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ
ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ
ಸಾಧು ಶ್ರೀನಾಥ್​
|

Updated on: Mar 16, 2021 | 6:16 PM

Share

ಪಣಜಿ: ಇನ್ಮುಂದೆ ದಕ್ಷಿಣ ಗೋವಾದಲ್ಲಿರುವ ಪೋಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಪೋಂಡಾ ಮಸೀದಿ ಮತ್ತು ಬೆಳಗಾವಿ ಬೈಪಾಸ್​ ರಸ್ತೆಯಲ್ಲಿರುವ ಪಣಜಿ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಅಥವಾ ಸಾರ್ವಜನಿಕವಾಗಿ ಸದ್ದು ಮಾಡುವ ಯಾವುದೇ ಯಂತ್ರಗಳ ಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಲೌಡ್​ಸ್ಪೀಕರ್ ಬಳಕೆಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಮತ್ತು ನಿಗದಿತ ಪ್ರಮಾಣದಲ್ಲಿಯೇ ಶಬ್ದ ಪ್ರಮಾಣ ಇರಬೇಕು ಎಂದು ಪೋಂಡಾ ನ್ಯಾಯಾಲಯ ಆದೇಶ ನೀಡಿದೆ.

ಒಂದು ವೇಳೆ ಇಲ್ಲಿನ ಯಾವುದೇ ಮಸೀದಿಯವರು ಲೌಡ್​ಸ್ಪೀಕರ್​ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಶಬ್ದ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪಾಲಿಸಲಾಗುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಂಡು ಅನುಮತಿ ನೀಡಬೇಕಾಗುತ್ತದೆ. ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು.

ಆದರೆ ಅದಕ್ಕಿಂತ ಹೆಚ್ಚಾಗಿ ಇದ್ದರೆ ಕ್ರಮ ಕೈಗೊಳ್ಳಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು ಎಂದೂ ದಕ್ಷಿಣ ಗೋವಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಇದೇ ತಿಂಗಳ 11ರಂದು ಆದೇಶ ಹೊರಡಿಸಿದ್ದಾರೆ.

 loudspeakers are not allowed in goa Mosques without permission

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

ಈ ಬಗ್ಗೆ ಪೋಂಡಾ ನ್ಯಾಯಾಲಯದಲ್ಲಿ ಸಾಫ್ಟ್​ವೇರ್​ ಎಂಜಿನಿಯರ್​ ಒಬ್ಬರು ದೂರು ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್