AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Loudspeakers in Mosques: ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ
ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ
Follow us
ಸಾಧು ಶ್ರೀನಾಥ್​
|

Updated on: Mar 16, 2021 | 6:16 PM

ಪಣಜಿ: ಇನ್ಮುಂದೆ ದಕ್ಷಿಣ ಗೋವಾದಲ್ಲಿರುವ ಪೋಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಪೋಂಡಾ ಮಸೀದಿ ಮತ್ತು ಬೆಳಗಾವಿ ಬೈಪಾಸ್​ ರಸ್ತೆಯಲ್ಲಿರುವ ಪಣಜಿ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಅಥವಾ ಸಾರ್ವಜನಿಕವಾಗಿ ಸದ್ದು ಮಾಡುವ ಯಾವುದೇ ಯಂತ್ರಗಳ ಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಲೌಡ್​ಸ್ಪೀಕರ್ ಬಳಕೆಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಮತ್ತು ನಿಗದಿತ ಪ್ರಮಾಣದಲ್ಲಿಯೇ ಶಬ್ದ ಪ್ರಮಾಣ ಇರಬೇಕು ಎಂದು ಪೋಂಡಾ ನ್ಯಾಯಾಲಯ ಆದೇಶ ನೀಡಿದೆ.

ಒಂದು ವೇಳೆ ಇಲ್ಲಿನ ಯಾವುದೇ ಮಸೀದಿಯವರು ಲೌಡ್​ಸ್ಪೀಕರ್​ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಶಬ್ದ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪಾಲಿಸಲಾಗುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಂಡು ಅನುಮತಿ ನೀಡಬೇಕಾಗುತ್ತದೆ. ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು.

ಆದರೆ ಅದಕ್ಕಿಂತ ಹೆಚ್ಚಾಗಿ ಇದ್ದರೆ ಕ್ರಮ ಕೈಗೊಳ್ಳಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು ಎಂದೂ ದಕ್ಷಿಣ ಗೋವಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಇದೇ ತಿಂಗಳ 11ರಂದು ಆದೇಶ ಹೊರಡಿಸಿದ್ದಾರೆ.

 loudspeakers are not allowed in goa Mosques without permission

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

ಈ ಬಗ್ಗೆ ಪೋಂಡಾ ನ್ಯಾಯಾಲಯದಲ್ಲಿ ಸಾಫ್ಟ್​ವೇರ್​ ಎಂಜಿನಿಯರ್​ ಒಬ್ಬರು ದೂರು ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ