ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Loudspeakers in Mosques: ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ
ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ

Updated on: Mar 16, 2021 | 6:16 PM

ಪಣಜಿ: ಇನ್ಮುಂದೆ ದಕ್ಷಿಣ ಗೋವಾದಲ್ಲಿರುವ ಪೋಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಪೋಂಡಾ ಮಸೀದಿ ಮತ್ತು ಬೆಳಗಾವಿ ಬೈಪಾಸ್​ ರಸ್ತೆಯಲ್ಲಿರುವ ಪಣಜಿ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಅಥವಾ ಸಾರ್ವಜನಿಕವಾಗಿ ಸದ್ದು ಮಾಡುವ ಯಾವುದೇ ಯಂತ್ರಗಳ ಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಲೌಡ್​ಸ್ಪೀಕರ್ ಬಳಕೆಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಮತ್ತು ನಿಗದಿತ ಪ್ರಮಾಣದಲ್ಲಿಯೇ ಶಬ್ದ ಪ್ರಮಾಣ ಇರಬೇಕು ಎಂದು ಪೋಂಡಾ ನ್ಯಾಯಾಲಯ ಆದೇಶ ನೀಡಿದೆ.

ಒಂದು ವೇಳೆ ಇಲ್ಲಿನ ಯಾವುದೇ ಮಸೀದಿಯವರು ಲೌಡ್​ಸ್ಪೀಕರ್​ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಶಬ್ದ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪಾಲಿಸಲಾಗುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಂಡು ಅನುಮತಿ ನೀಡಬೇಕಾಗುತ್ತದೆ. ಅನುಮತಿ ನೀಡಿದ ಬಳಿಕವೂ ಮಸೀದಿಯಲ್ಲಿ ಲೌಡ್​ಸ್ಪೀಕರ್​ ಬಳಕೆಯಿಂದ ಶಬ್ದ ಮಾಲಿನ್ಯವು ನಿಗದಿತ ಪ್ರಮಾಣಕ್ಕಿಂತ 10 ಡೆಸಿಬಲ್ಸ್ ಮಾತ್ರ ಹೆಚ್ಚಾಗಿರಬಹುದು.

ಆದರೆ ಅದಕ್ಕಿಂತ ಹೆಚ್ಚಾಗಿ ಇದ್ದರೆ ಕ್ರಮ ಕೈಗೊಳ್ಳಬಹುದು. ಪೋಂಡಾ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್​ ಈ ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಬಳಕೆ ಮೇಲೆ ನಿಗಾವಹಿಸಿ, ನ್ಯಾಯಾಲಯದ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುತ್ತಿದೆಯಾ? ಎಂಬುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಬೇಕು ಎಂದೂ ದಕ್ಷಿಣ ಗೋವಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಇದೇ ತಿಂಗಳ 11ರಂದು ಆದೇಶ ಹೊರಡಿಸಿದ್ದಾರೆ.

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

ಈ ಬಗ್ಗೆ ಪೋಂಡಾ ನ್ಯಾಯಾಲಯದಲ್ಲಿ ಸಾಫ್ಟ್​ವೇರ್​ ಎಂಜಿನಿಯರ್​ ಒಬ್ಬರು ದೂರು ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us