ಅತ್ಯಾಚಾರ ಆರೋಪ ಮಾಡಿದ ಗೆಳತಿ, ಮನನೊಂದು ರೈಲಿನೆದುರು ಹಾರಿ ಪ್ರಾಣಬಿಟ್ಟ ಟೆಕ್ಕಿ

ಗೆಳತಿ ಅತ್ಯಾಚಾರ ಆರೋಪ ಮಾಡಿದ್ದಕ್ಕಾಗಿ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 29 ವರ್ಷದ ಎಂಜಿನಿಯರ್ ಗೆಳತಿಯೇ ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದಕ್ಕೆ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಪ್ರೀತಿ ಹೆಸರಿನಲ್ಲಿ ದ್ರೋಹ ಬಗೆದಿದ್ದಾರೆ ಎಂದು ಆತ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. ಸೆಪ್ಟೆಂಬರ್ 27 ರಂದು ಉಸಲಾಪುರ ರೈಲ್ವೆ ಹಳಿಯಲ್ಲಿ ಗೌರವ್ ಸವನ್ನಿ ಅವರ ಮೃತದೇಹ ಪತ್ತೆಯಾಗಿತ್ತು. ಪೊಲೀಸರ ಪ್ರಕಾರ, ಗೌರವ್ ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದಾಗ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಯುವತಿಯೊಬ್ಬಳನ್ನು ಭೇಟಿಯಾಗಿದ್ದರು.

ಅತ್ಯಾಚಾರ ಆರೋಪ ಮಾಡಿದ ಗೆಳತಿ, ಮನನೊಂದು ರೈಲಿನೆದುರು ಹಾರಿ ಪ್ರಾಣಬಿಟ್ಟ ಟೆಕ್ಕಿ
ಟೆಕ್ಕಿ

Updated on: Sep 30, 2025 | 10:13 AM

ಬಿಲಾಸ್​ಪುರ್, ಸೆಪ್ಟೆಂಬರ್ 30: ಗೆಳತಿ ಅತ್ಯಾಚಾರ ಆರೋಪ ಮಾಡಿದ್ದಕ್ಕಾಗಿ ಮನನೊಂದು ಟೆಕ್ಕಿ(Techie) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 29 ವರ್ಷದ ಎಂಜಿನಿಯರ್ ಗೆಳತಿಯೇ ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದಕ್ಕೆ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಪ್ರೀತಿ ಹೆಸರಿನಲ್ಲಿ ದ್ರೋಹ ಬಗೆದಿದ್ದಾರೆ ಎಂದು ಆತ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ.

ಸೆಪ್ಟೆಂಬರ್ 27 ರಂದು ಉಸಲಾಪುರ ರೈಲ್ವೆ ಹಳಿಯಲ್ಲಿ ಗೌರವ್ ಸವನ್ನಿ ಅವರ ಮೃತದೇಹ ಪತ್ತೆಯಾಗಿತ್ತು. ಪೊಲೀಸರ ಪ್ರಕಾರ, ಗೌರವ್ ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದಾಗ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಯುವತಿಯೊಬ್ಬಳನ್ನು ಭೇಟಿಯಾಗಿದ್ದರು. ಕಾಲಾನಂತರದಲ್ಲಿ ಸಂಬಂಧವು ತುಂಬಾ ಹತ್ತಿರವಾಯಿತು, ಆದರೆ ನಂತರ ಮಹಿಳೆ ಅವರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಳು.

ಪ್ರಕರಣದ ನಂತರ, ಗೌರವ್ ಅವರನ್ನು ಬಂಧಿಸಲಾಗಿತ್ತು ಮತ್ತು ಜೈಲಿನಲ್ಲಿ ಕೆಲವು ಸಮಯ ಕಳೆದಿದ್ದರು ಮತ್ತು ಅವರ ಸಾವಿಗೆ ಸುಮಾರು 15 ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಮನೆಗೆ ಹಿಂದಿರುಗಿದ ನಂತರ, ಗೌರವ್ ಯಾವಾಗಲೂ ದುಃಖದಲ್ಲೇ ಇರುತ್ತಿದ್ದರು, ಖಿನ್ನತೆ ಆವರಿಸಿತ್ತು, ಎಲ್ಲರೊಂದಿಗೆ ಮಾತನಾಡುವುದನ್ನೇ ನಿಲ್ಲಿಸಿದ್ದರು. ಯಾವಾಗಲೂ ಅಸಮಾಧಾನದಲ್ಲೇ ಇರುತ್ತಿದ್ದರು.

ಮತ್ತಷ್ಟು ಓದಿ: ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಗೌರವ್ ಯಾವಾಗಲೂ ನಗು ನಗುತ್ತಾ ಇರುವ ವ್ಯಕ್ತಿಯಾಗಿದ್ದರು. ಆದರೆ ಇತ್ತೀಚಿನ ಘಟನೆಗಳು ಅವರನ್ನು ತೀವ್ರವಾಗಿ ಘಾಸಿಗೊಳಿಸಿತ್ತು ಎಂದು ಗೌರವ್ ಸ್ನೇಹಿತ ಸಂದೀಪ್ ಗುಪ್ತಾ ಹೇಳಿದ್ದಾರೆ. ಮತ್ತೊಬ್ಬ ಸ್ನೇಹಿತ ಟಿಪ್ಸಿ ಮಕ್ಕರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅವರು ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಮತ್ತು ತುಂಬಾ ನೊಂದಿದ್ದರು ಎಂದು ಹೇಳಿದರು. ಆತ್ಮಹತ್ಯೆಗೆ ಕಾರಣಗಳ ಬಗ್ಗೆ ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜನೇಶ್ ಸಿಂಗ್ ತಿಳಿಸಿದ್ದಾರೆ.

ಮತ್ತೊಂದು ಘಟನೆ

ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಷಯ ತಿಳಿಸಿ ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಸಾಫ್ಟ್​ವೇರ್ ಎಂಜಿನಿಯರ್ ಪತ್ನಿಯ ಜತೆ ಜಗಳವಾಡಿ ಆಕೆಯನ್ನು ಕೊಂದು ಸ್ನೇಹಿತನಿಗೆ ವಿಷಯ ತಿಳಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾದರು. ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಪೊಲೀಸರು ತಿಳಿಸಿರುವ ಪ್ರಕಾರ, ಕುಮಾರ್ ಅವರ ಸ್ನೇಹಿತನಿಂದ ಕರೆ ಬಂದಿದ್ದು, ಮಧ್ಯಾಹ್ನ 3.15 ಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಕಳುಹಿಸಿದ್ದೇನೆ ಎಂದು ಹೇಳಿದ್ದಾನೆ. ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದಿತ್ತು.

ಪೊಲೀಸರು ಸೆಕ್ಟರ್ 37 ರಲ್ಲಿರುವ ವಸತಿ ಸೊಸೈಟಿಯಲ್ಲಿರುವ ಅವರ ಫ್ಲಾಟ್ ಅನ್ನು ತಲುಪಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು, ಆ ಸ್ಕಾರ್ಫ್ ಅನ್ನು ಆಕೆಯ ಕುತ್ತಿಗೆ ಹಿಸುಕಿ ಕೊಲ್ಲಲು ಬಳಸಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us