AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್‌ಪ್ರೀತ್ ತೂಫಾನ್ ಜೈಲಿನಿಂದ ಬಿಡುಗಡೆ

ಅಮೃತಪಾಲ್ ಸಿಂಗ್ ಮತ್ತು ಅವರ 30 ಬೆಂಬಲಿಗರ ವಿರುದ್ಧ ರೂಪನಗರ ಜಿಲ್ಲೆಯ ಚಮ್ಕೌರ್ ಸಾಹಿಬ್ ನಿವಾಸಿ ಬರೀಂದರ್ ಸಿಂಗ್ ಎಂಬವರನ್ನು ಅಪಹರಿಸಿ ಥಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್‌ಪ್ರೀತ್ ತೂಫಾನ್ ಜೈಲಿನಿಂದ ಬಿಡುಗಡೆ
ಲವ್‌ಪ್ರೀತ್ ತೂಫಾನ್
ರಶ್ಮಿ ಕಲ್ಲಕಟ್ಟ
|

Updated on:Feb 24, 2023 | 5:42 PM

Share

ವಾರಿಸ್ ಪಂಜಾಬ್ ದೇ (Waris Punjab De)ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್‌ಪ್ರೀತ್ ತೂಫಾನ್‌ನ್ನು(Lovepreet Toofan) ಶುಕ್ರವಾರ ಪಂಜಾಬ್‌ನ ಅಜ್ನಾಲಾ ನ್ಯಾಯಾಲಯವು ಬಿಡುಗಡೆ ಮಾಡಲು ಆದೇಶಿಸಿದ ನಂತರ ಅಮೃತಸರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಒಂದು ದಿನದ ಹಿಂದೆ ಅಮೃತಪಾಲ್ ಸಿಂಗ್ ಬೆಂಬಲಿಗರು ಕತ್ತಿಮತ್ತು ಬಂದೂಕುಗಳನ್ನು ಝಳಪಿಸುತ್ತಾ, ಬ್ಯಾರಿಕೇಡ್‌ಗಳನ್ನು ಭೇದಿಸಿ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿದ್ದರು. ಅಪಹರಣ ಪ್ರಕರಣದ ಆರೋಪಿ ಲವ್‌ಪ್ರೀತ್ ಸಿಂಗ್ ಅಲಿಯಾಸ್ ತೂಫಾನ್‌ನನ್ನು ಬಿಡುಗಡೆ ಮಾಡಬೇಕೆಂದು ಬೆಂಬಲಿಗರು ಪೊಲೀಸ್ ಠಾಣೆಗೆ ನುಗ್ಗಿದ್ದರು.ಇದಕ್ಕೂ ಮೊದಲು, ದುಬೈನಿಂದ ಹಿಂದಿರುಗಿದ ಅಮೃತಪಾಲ್ ಸಿಂಗ್, ‘ವಾರಿಸ್ ಪಂಜಾಬ್ ದೇ’ ಎಂಬ ಸಂಘಟನೆಯ ಮುಖ್ಯಸ್ಥರು, ತಮ್ಮ ಬೆಂಬಲಿಗ ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಸುಗ್ರೀವಾಜ್ಞೆ ನೀಡಿದ್ದರು.

ಅಮೃತಪಾಲ್ ಸಿಂಗ್ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಗತಿಯೇ ಶಾ ಅವರಿಗೆ ಬರಲಿದೆ ಎಂದಿದ್ದ ಸಿಂಗ್.

ಅಮೃತಪಾಲ್ ಸಿಂಗ್ ಮತ್ತು ಅವರ 30 ಬೆಂಬಲಿಗರ ವಿರುದ್ಧ ರೂಪನಗರ ಜಿಲ್ಲೆಯ ಚಮ್ಕೌರ್ ಸಾಹಿಬ್ ನಿವಾಸಿ ಬರೀಂದರ್ ಸಿಂಗ್ ಎಂಬವರನ್ನು ಅಪಹರಿಸಿ ಥಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಟ, ಕಾರ್ಯಕರ್ತ ದೀಪ್ ಸಿಧು ಅವರು ಸ್ಥಾಪಿಸಿದ ‘ವಾರಿಸ್ ಪಂಜಾಬ್ ದೇ’ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ ಅಮೃತಪಾಲ್ ಸಿಂಗ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Fri, 24 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!