ಕುಟುಂಬದವರು ಪ್ರಿಯಕರನನ್ನು ಹೊಡೆದು ಕೊಂದಿದ್ದಕ್ಕೆ ತನ್ನ ಕತ್ತು ಸೀಳಿಕೊಂಡ ಯುವತಿ

ಪರ್ಚ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಹಮೀರ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಾ ಶರ್ಮಾ ತಿಳಿಸಿದ್ದಾರೆ. ಯುವತಿ ಕೂಡ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅವರು ಹೇಳಿದರು.ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಕುಟುಂಬದವರು ಪ್ರಿಯಕರನನ್ನು ಹೊಡೆದು ಕೊಂದಿದ್ದಕ್ಕೆ ತನ್ನ ಕತ್ತು ಸೀಳಿಕೊಂಡ ಯುವತಿ
ಪ್ರೀತಿ

Updated on: Oct 30, 2025 | 9:06 AM

ಉತ್ತರ ಪ್ರದೇಶ, ಅಕ್ಟೋಬರ್ 30: ತನ್ನ ಪ್ರೇಯಸಿಯ ಮದುವೆಯಾಗುತ್ತಿದೆ ಎಂದು ಗಾಬರಿಯಿಂದ ಓಡೋಡಿ ಬಂದಿದ್ದ ವ್ಯಕ್ತಿಯನ್ನು ಯುವತಿಯ ಕುಟುಂಬಸ್ಥರು ಸೇರಿ ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಮನೆಯವರು ರವಿ ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಲು ಪ್ರಾರಂಭಿಸಿದ್ದರು. ಅದಕ್ಕೆ ಗ್ರಾಮದ ನಿವಾಸಿಗಳು ಕೂಡ ಸೇರಿಕೊಂಡರು.

ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಚಿಕಿತ್ಸೆಗಾಗಿ ಪಿಂಟು ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ:  ಬೆಂಗಳೂರಿನಲ್ಲಿ ಮಲತಂದೆಯಿಂದ ಬಾಲಕಿ ಸಿರಿ ಹತ್ಯೆ ಪ್ರಕರಣ ; ಶುಕ್ರವಾರ ಆ ಮನೆಯಲ್ಲಿ ನಡೆದಿದ್ದೇನು!

ರವಿ ನಿಧನರಾದ ಸುದ್ದಿ ತಿಳಿದ ಕೂಡಲೇ ಯುವತಿ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆ ಮತ್ತು ಆಕೆಯ ಚಿಕ್ಕಪ್ಪ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಆಕೆಯನ್ನು ಮೌದಹಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಪಿಂಟು ಮೇಲೆ ಹಲ್ಲೆ ನಡೆಸಿದ್ದು ರವಿ ಎಂದು ಕುಟುಂಬದವರು ಹೇಳಿದ್ದಾರೆ.

ಪಿಂಟುವಿನ ಹೆಂಡತಿಯಾದ ಮನೀಷಾಳ ಚಿಕ್ಕಮ್ಮ, ರವಿ ಪಿಂಟುವಿನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದ್ದಾಳೆ. ಪಿಂಟು ಬಾಗಿಲು ತೆರೆದಾಗ ರವಿ ಅವನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us