AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕೇರಳದಲ್ಲಿ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಶನಿವಾರದಿಂದಲೇ ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕೇರಳದಲ್ಲಿ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್
ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ.
TV9 Web
| Edited By: |

Updated on:May 15, 2022 | 3:35 PM

Share

ತಿರುವನಂತಪುರ: ಕೇರಳದಲ್ಲಿ ಬುಧವಾರದವರೆಗೆ (ಮೇ 18) ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಶನಿವಾರದಿಂದಲೇ ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಿಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನದಿ, ಕಾಲುವೆಗಳು ತುಂಬಿ ಹರಿಯುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಚಾರ ಅಸ್ತವ್ಯವಸ್ತಗೊಂಡಿದೆ. ಪೂನ್​ಜಾರ್​ನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಪೆರಿನ್​ಗುಲಮ್, ಆದಿವಾರಮ್ ಪ್ರದೇಶಗಳಲ್ಲಿ ಪ್ರವಾಹ ಭೀತಿ ಆವರಿಸಿದೆ.

ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಎರುಮೇಲಿ-ಮುಂಡಕ್ಕಯಮ್ ಪ್ರದೇಶಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ತಿರುವನಂತಪುರದಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗದಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿದೆ. ಮುಂದಕ್ಕಯಂ ನದಿಯಲ್ಲಿ ನೀರಿನ ಮಟ್ಟ ಒಂದೇ ಸಮನೆ ಹೆಚ್ಚಾಗುತ್ತಿದೆ. ಕಂಜಿರಪ್ಪಲ್ಲಿ-ಎರಟ್ಟುಪೆಟ್ಟ ರಸ್ತೆಗಳಲ್ಲಿ ಪ್ರವಾಹದ ನೀರು ಹರಿಯುತ್ತಿದೆ. ಹಲವು ಮನೆಗಳು ಮುಳುಗಿವೆ. ಪತ್ತಿನಂತಿಟ್ಟ ಜಿಲ್ಲೆಯಲ್ಲಿ ಪಂಪಾ, ಅಚನ್​ಕೊವಿಲ್ ಮತ್ತು ಮಣಿಮಾಲಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕಕ್ಕಿ-ಅನತೋಡು ಜಲಾಶಯದಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವೇ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಹೇಳಿದೆ. ತಿರುವನಂತಪುರ, ಕೊಲ್ಲಂ, ಪತ್ತಿನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ಅಲಪುಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತ್ರಿಶೂರ್, ಮಲಪ್ಪುರಂ, ಕೊಯಿಕ್ಕೋಡ್, ವಯನಾಡ್ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Published On - 3:34 pm, Sun, 15 May 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ