Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ

Delhi: ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ
ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಬಿದ್ದಿದೆ
Follow us
TV9 Web
| Updated By: Lakshmi Hegde

Updated on: Jul 01, 2021 | 9:04 AM

ನವದೆಹಲಿ: ಇಲ್ಲಿನ ಶಹದಾರಾದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಎಲ್​​ಪಿಜಿ ಸಿಲಿಂಡರ್​ ಸ್ಫೋಟಗೊಂಡು ಮಹಿಳೆ ಸೇರಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್​ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ನಂದಿಸಲು 9 ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿದ್ದವು. ಸಿಲಿಂಡರ್ ಸ್ಫೋಟದಿಂದ ಒಂದು ಮನೆ ಭಾಗಶಃ ಕುಸಿದುಬಿದ್ದಿದೆ. ಐವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನಿ ದೇವಿ (45), ನರೇಶ್​ (22), ಓಂ ಪ್ರಕಾಶ್ (20) ಮತ್ತು ಸುಮನ್​ (18) ಮೃತರು. ಇವರಲ್ಲಿ ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಇನ್ನು ಲಾಲ್​ ಚಾಂದ್​ (29) ಎಂಬುವರಿಗೂ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಸಂಬಂಧ ತನಿಖೆ ಶುರುವಾಗಿದೆ.

ಸದ್ಯ ಕುಸಿದು ಬಿದ್ದಿರುವ ಮನೆಯ ಎದುರು ಒಂದು ಭಾಗದಲ್ಲಿ ಗ್ಯಾಸ್​ ಸ್ಟವ್​ ದುರಸ್ತಿ ಅಂಗಡಿ ಇತ್ತು. ಅಲ್ಲೇ ಸಿಲಿಂಡರ್ ಸ್ಫೋಟಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಮನೆಯ ಬಾಗಿಲು-ಕಿಟಕಿಗಳನ್ನು ಮುರಿದು ಐವರನ್ನೂ ಹೊರಗೆ ಕರೆತಂದರು. ಆದರೂ ಅಷ್ಟರಲ್ಲಾಗಲೇ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಬೆಂಕಿಯೂ ಆವರಿಸಿತ್ತು. ಇದರಿಂದಾಗಿ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸ್​ ಅಧಿಕಾರಿ ಸತ್ಯಸುಂದರಂ ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಜುಲೈ ತಿಂಗಳ ಆರಂಭದಲ್ಲಿ ಗ್ರಾಹಕರಿಗೆ ಖುಷಿ ಸುದ್ದಿ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

(LPG cylinder explosion kills four in Delhi)

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ