AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ

Delhi: ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ
ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಬಿದ್ದಿದೆ
TV9 Web
| Edited By: |

Updated on: Jul 01, 2021 | 9:04 AM

Share

ನವದೆಹಲಿ: ಇಲ್ಲಿನ ಶಹದಾರಾದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಎಲ್​​ಪಿಜಿ ಸಿಲಿಂಡರ್​ ಸ್ಫೋಟಗೊಂಡು ಮಹಿಳೆ ಸೇರಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್​ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ನಂದಿಸಲು 9 ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿದ್ದವು. ಸಿಲಿಂಡರ್ ಸ್ಫೋಟದಿಂದ ಒಂದು ಮನೆ ಭಾಗಶಃ ಕುಸಿದುಬಿದ್ದಿದೆ. ಐವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನಿ ದೇವಿ (45), ನರೇಶ್​ (22), ಓಂ ಪ್ರಕಾಶ್ (20) ಮತ್ತು ಸುಮನ್​ (18) ಮೃತರು. ಇವರಲ್ಲಿ ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಇನ್ನು ಲಾಲ್​ ಚಾಂದ್​ (29) ಎಂಬುವರಿಗೂ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಸಂಬಂಧ ತನಿಖೆ ಶುರುವಾಗಿದೆ.

ಸದ್ಯ ಕುಸಿದು ಬಿದ್ದಿರುವ ಮನೆಯ ಎದುರು ಒಂದು ಭಾಗದಲ್ಲಿ ಗ್ಯಾಸ್​ ಸ್ಟವ್​ ದುರಸ್ತಿ ಅಂಗಡಿ ಇತ್ತು. ಅಲ್ಲೇ ಸಿಲಿಂಡರ್ ಸ್ಫೋಟಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಮನೆಯ ಬಾಗಿಲು-ಕಿಟಕಿಗಳನ್ನು ಮುರಿದು ಐವರನ್ನೂ ಹೊರಗೆ ಕರೆತಂದರು. ಆದರೂ ಅಷ್ಟರಲ್ಲಾಗಲೇ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಬೆಂಕಿಯೂ ಆವರಿಸಿತ್ತು. ಇದರಿಂದಾಗಿ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸ್​ ಅಧಿಕಾರಿ ಸತ್ಯಸುಂದರಂ ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಜುಲೈ ತಿಂಗಳ ಆರಂಭದಲ್ಲಿ ಗ್ರಾಹಕರಿಗೆ ಖುಷಿ ಸುದ್ದಿ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

(LPG cylinder explosion kills four in Delhi)

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ