AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ

Delhi: ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ
ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಬಿದ್ದಿದೆ
TV9 Web
| Edited By: |

Updated on: Jul 01, 2021 | 9:04 AM

Share

ನವದೆಹಲಿ: ಇಲ್ಲಿನ ಶಹದಾರಾದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಎಲ್​​ಪಿಜಿ ಸಿಲಿಂಡರ್​ ಸ್ಫೋಟಗೊಂಡು ಮಹಿಳೆ ಸೇರಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್​ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ನಂದಿಸಲು 9 ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿದ್ದವು. ಸಿಲಿಂಡರ್ ಸ್ಫೋಟದಿಂದ ಒಂದು ಮನೆ ಭಾಗಶಃ ಕುಸಿದುಬಿದ್ದಿದೆ. ಐವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನಿ ದೇವಿ (45), ನರೇಶ್​ (22), ಓಂ ಪ್ರಕಾಶ್ (20) ಮತ್ತು ಸುಮನ್​ (18) ಮೃತರು. ಇವರಲ್ಲಿ ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಇನ್ನು ಲಾಲ್​ ಚಾಂದ್​ (29) ಎಂಬುವರಿಗೂ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಸಂಬಂಧ ತನಿಖೆ ಶುರುವಾಗಿದೆ.

ಸದ್ಯ ಕುಸಿದು ಬಿದ್ದಿರುವ ಮನೆಯ ಎದುರು ಒಂದು ಭಾಗದಲ್ಲಿ ಗ್ಯಾಸ್​ ಸ್ಟವ್​ ದುರಸ್ತಿ ಅಂಗಡಿ ಇತ್ತು. ಅಲ್ಲೇ ಸಿಲಿಂಡರ್ ಸ್ಫೋಟಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಮನೆಯ ಬಾಗಿಲು-ಕಿಟಕಿಗಳನ್ನು ಮುರಿದು ಐವರನ್ನೂ ಹೊರಗೆ ಕರೆತಂದರು. ಆದರೂ ಅಷ್ಟರಲ್ಲಾಗಲೇ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಬೆಂಕಿಯೂ ಆವರಿಸಿತ್ತು. ಇದರಿಂದಾಗಿ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸ್​ ಅಧಿಕಾರಿ ಸತ್ಯಸುಂದರಂ ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಜುಲೈ ತಿಂಗಳ ಆರಂಭದಲ್ಲಿ ಗ್ರಾಹಕರಿಗೆ ಖುಷಿ ಸುದ್ದಿ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

(LPG cylinder explosion kills four in Delhi)

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!