AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 14, 2021 | 11:32 PM

Share

ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ಲಾಕ್​ಡೌನ್​​ ಅವಧಿಯಲ್ಲಿ ತೈಲ ಬೆಲೆ ಯಾವುದೇ ಏರಿಳಿತ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಲೀಟರ್ ಪೆಟ್ರೋಲ್​ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ.

ನಾಳೆಯಿಂದ ಪ್ರತಿ ಸಿಲಿಂಡರ್​ ಬೆಲೆ 50 ರೂಪಾಯಿ ಹೆಚ್ಚಾಗಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್​ ಬೆಲೆ 769 ರೂಪಾಯಿ ಆಗಲಿದೆ.  ಈ ಮೊದಲು 722 ರೂಪಾಯಿ ಇತ್ತು. ರಾಜ್ಯದಿಂದ ರಾಜ್ಯಕ್ಕೆ ಈ ದರ ಭಿನ್ನವಾಗಿರಲಿದೆ.

2020ರ ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿತ್ತು. ಜೂನ್​, ಜುಲೈನಲ್ಲಿ ಮತ್ತೆ ಏರಿಕೆ ಕಂಡಿದ್ದ ದರ, ನಂತರ ನಾಲ್ಕು ತಿಂಗಳು ಯಾವುದೇ ಬದಲಾವಣೆ ಕಂಡಿರಲಿಲ್ಲ. 2021ರ ಜನವರಿ ತಿಂಗಳಲ್ಲಿ ಪ್ರತಿ ಸಿಲಿಂಡರ್​ ದರ 100 ರೂಪಾಯಿ ಏರಿಕೆ ಆಗಿತ್ತು.

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Petrol Price Today: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ

Published On - 9:59 pm, Sun, 14 February 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!