AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿಯರಿಗೆ ಗುಡ್​ ನ್ಯೂಸ್​: LPG ಗ್ಯಾಸ್​ ಸಿಲಿಂಡರ್​ ಬೆಲೆ ಕಡಿಮೆಯಾಗುವ ಲೆಕ್ಕಾಚಾರವಿದೆ!

ದೆಹಲಿ: ಲಾಕ್​ಡೌನ್​ ತಂದೊಡ್ಡಿರುವ ಆರ್ಥಿಕ ಸಂಕಷ್ಟ ಜನರ ಜೇಬಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಉದ್ಯೋಗ ಕಳೆದುಕೊಂಡ ಕೆಲವರು ಇದ್ದರೆ, ಮತ್ತಷ್ಟು ಜನರ ಆದಾಯದ ಮೂಲ ಬತ್ತು ಹೋಗಿ ಪರದಾಡುವ ಸ್ಥಿತಿ ಎದುರಾಗಿದೆ. ಆದರೆ, ಇದೀಗ ಕೇಂದ್ರ ಸರ್ಕಾರ ಜನರಿಗೆ ಸಂಕಷ್ಟದಿಂದ ಕೊಂಚ ರಿಲೀಫ್​ ನೀಡಲು ಮುಂದಾಗಿದೆ. ಹೌದು, ಕೇಂದ್ರ ಸರ್ಕಾರ ಇದೀಗ ದ್ರವೀಕೃತ ಪೆಟ್ರೋಲಿಯಮ್​ ಅನಿಲ (LPG )​ ಸಿಲಿಂಡರ್​ಗಳ ಬೆಲೆಯನ್ನ ಮತ್ತಷ್ಟು ಅಗ್ಗಗೊಳಿಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ್ಕಾರವು LPG ಅನಿಲದ ಪರಿಷ್ಕೃತ […]

ಗೃಹಿಣಿಯರಿಗೆ ಗುಡ್​ ನ್ಯೂಸ್​: LPG ಗ್ಯಾಸ್​ ಸಿಲಿಂಡರ್​ ಬೆಲೆ ಕಡಿಮೆಯಾಗುವ ಲೆಕ್ಕಾಚಾರವಿದೆ!
KUSHAL V
| Edited By: |

Updated on:Aug 17, 2020 | 6:30 PM

Share

ದೆಹಲಿ: ಲಾಕ್​ಡೌನ್​ ತಂದೊಡ್ಡಿರುವ ಆರ್ಥಿಕ ಸಂಕಷ್ಟ ಜನರ ಜೇಬಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಉದ್ಯೋಗ ಕಳೆದುಕೊಂಡ ಕೆಲವರು ಇದ್ದರೆ, ಮತ್ತಷ್ಟು ಜನರ ಆದಾಯದ ಮೂಲ ಬತ್ತು ಹೋಗಿ ಪರದಾಡುವ ಸ್ಥಿತಿ ಎದುರಾಗಿದೆ. ಆದರೆ, ಇದೀಗ ಕೇಂದ್ರ ಸರ್ಕಾರ ಜನರಿಗೆ ಸಂಕಷ್ಟದಿಂದ ಕೊಂಚ ರಿಲೀಫ್​ ನೀಡಲು ಮುಂದಾಗಿದೆ.

ಹೌದು, ಕೇಂದ್ರ ಸರ್ಕಾರ ಇದೀಗ ದ್ರವೀಕೃತ ಪೆಟ್ರೋಲಿಯಮ್​ ಅನಿಲ (LPG )​ ಸಿಲಿಂಡರ್​ಗಳ ಬೆಲೆಯನ್ನ ಮತ್ತಷ್ಟು ಅಗ್ಗಗೊಳಿಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ್ಕಾರವು LPG ಅನಿಲದ ಪರಿಷ್ಕೃತ ದರವನ್ನ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಮಾಡಲು ಮುಂದಾಗಿದೆ.

ಇದು ಅಕ್ಟೋಬರ್​ ತಿಂಗಳ ಲೆಕ್ಕಾಚಾರಕ್ಕೆ ಪ್ರತಿ ಮಿಲಿಯನ್​ ಬ್ರಿಟಿಷ್​ ಥರ್ಮಲ್​ ಯೂನಿಟ್ಸ್​ಗೆ (MMBtu) ಕೇಂದ್ರ ಸರ್ಕಾರವು ಅಕ್ಟೋಬರ್​ ತಿಂಗಳ ಖಾತೆಗೆ 1.94 ಡಾಲರ್ ದರ ನಿಗದಿ ಮಾಡಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ನಿಗದಿಯಾಗಿರುವ ಅತ್ಯಂತ ಕಡಿಮೆ ದರ ಎಂದು ತಿಳಿದುಬಂದಿದೆ. ಹೀಗಾಗಿ, ಪ್ರತಿ LPG ಸಿಲಿಂಡರ್​ನ ಬೆಲೆ ಮತ್ತಷ್ಟು ಅಗ್ಗ ಆಗಲಿದೆಯಂತೆ.

ಇನ್ನು ಪರಿಷ್ಕೃತ ದರ ಅಕ್ಟೋಬರ್​ 1ರಿಂದ ಜಾರಿಗೆ ಬರುವ ಸಾಧ್ಯತೆಯಿದ್ದು ಇದರಿಂದ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಆಗಲಿದೆ. ಆದರೆ, ಕೇಂದ್ರದ ಈ ನಿರ್ಧಾರದಿಂದ ಸರ್ಕಾರಿ ನೈಸರ್ಗಿಕ ತೈಲ ಉತ್ಪಾದಕ ONGC ಕಂಪನಿಗೆ ಮತ್ತಷ್ಟು ಆರ್ಥಿಕ ಹೊರೆ ಎದುರಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪರಿಷ್ಕೃತ ದರದಿಂದ ONGC ಸುಮಾರು 6,000 ಕೋಟಿ ರೂಪಾಯಿ ನಷ್ಟ ಅನುಭವಿಸುವ ಸ್ಥಿತಿ ಕಾಣಬಹುದು ಎಂದು ಅಂದಾಜಿಸಿದ್ದಾರೆ.

Published On - 6:30 pm, Mon, 17 August 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!