AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ
ಲೆಫ್ಟಿನೆಂಟ್ ಜನರಲ್​ ಮನೋಜ್ ಪಾಂಡೆ
TV9 Web
| Edited By: |

Updated on:Apr 18, 2022 | 6:44 PM

Share

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ ಸೇನೆಯ 29ನೇ ಮುಖ್ಯಸ್ಥರಾಗಿದ್ದಾರೆ. ಇದೀಗ ಮನೋಜನ್​ ಪಾಂಡೆ ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದನ್ನು ಭಾರತೀಯ ರಕ್ಷಣಾ ಇಲಾಖೆ ಘೋಷಣೆ ಮಾಡಿದೆ. ಅಂದಹಾಗೇ, ಮನೋಜ್​ ಪಾಂಡೆಯವರು ಕಾರ್ಪ್​ ಆಫ್​ ಇಂಜಿನಿಯರ್​ ವಿಭಾಗದಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು. ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ.  2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ.  ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಇದನ್ನೂ ಓದಿ: ಭಾರತ ಇಸ್ಲಾಮಿಕ್ ದೇಶವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಿ: ಯತಿ ನರಸಿಂಹಾನಂದ

Published On - 6:23 pm, Mon, 18 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ