AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ
ಲೆಫ್ಟಿನೆಂಟ್ ಜನರಲ್​ ಮನೋಜ್ ಪಾಂಡೆ
TV9 Web
| Edited By: |

Updated on:Apr 18, 2022 | 6:44 PM

Share

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ ಸೇನೆಯ 29ನೇ ಮುಖ್ಯಸ್ಥರಾಗಿದ್ದಾರೆ. ಇದೀಗ ಮನೋಜನ್​ ಪಾಂಡೆ ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದನ್ನು ಭಾರತೀಯ ರಕ್ಷಣಾ ಇಲಾಖೆ ಘೋಷಣೆ ಮಾಡಿದೆ. ಅಂದಹಾಗೇ, ಮನೋಜ್​ ಪಾಂಡೆಯವರು ಕಾರ್ಪ್​ ಆಫ್​ ಇಂಜಿನಿಯರ್​ ವಿಭಾಗದಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು. ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ.  2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ.  ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಇದನ್ನೂ ಓದಿ: ಭಾರತ ಇಸ್ಲಾಮಿಕ್ ದೇಶವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಿ: ಯತಿ ನರಸಿಂಹಾನಂದ

Published On - 6:23 pm, Mon, 18 April 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ