AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕ
ಲೆಫ್ಟಿನೆಂಟ್ ಜನರಲ್​ ಮನೋಜ್ ಪಾಂಡೆ
TV9 Web
| Updated By: Lakshmi Hegde|

Updated on:Apr 18, 2022 | 6:44 PM

Share

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ ಸೇನೆಯ 29ನೇ ಮುಖ್ಯಸ್ಥರಾಗಿದ್ದಾರೆ. ಇದೀಗ ಮನೋಜನ್​ ಪಾಂಡೆ ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದನ್ನು ಭಾರತೀಯ ರಕ್ಷಣಾ ಇಲಾಖೆ ಘೋಷಣೆ ಮಾಡಿದೆ. ಅಂದಹಾಗೇ, ಮನೋಜ್​ ಪಾಂಡೆಯವರು ಕಾರ್ಪ್​ ಆಫ್​ ಇಂಜಿನಿಯರ್​ ವಿಭಾಗದಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು. ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ.  2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ.  ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಇದನ್ನೂ ಓದಿ: ಭಾರತ ಇಸ್ಲಾಮಿಕ್ ದೇಶವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಿ: ಯತಿ ನರಸಿಂಹಾನಂದ

Published On - 6:23 pm, Mon, 18 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ