AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ನೌಕರರಿಗೆ ಮೋದಿ ಬಂಪರ್ ಗಿಫ್ಟ್.. ಏನಿದು ಎಲ್‌ಟಿಸಿ ನಗದು ಯೋಜನೆ?

ದೆಹಲಿ: ದೇಶದಲ್ಲಿ ಕೊರೊನಾ ವೈರಸ್​ನಿಂದ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಸಂಪ್ರದಾಯಿಕವಲ್ಲದ ಯೋಜನೆಗಳಿಂದ ದೇಶದಲ್ಲಿ ಬೇಡಿಕೆ ಸೃಷ್ಟಿಯಾಗುವ ನಿರೀಕ್ಷೆ ಇದ್ದು, ಆರ್ಥಿಕತೆ ಚೇತರಿಕೆಯಾಗುವ ವಿಶ್ವಾಸವೂ ಇದೆ. ಇದಕ್ಕಾಗಿ ಹೊಸ ಯೋಜನೆ ಸಿದ್ಧವಾಗಿದೆ. ದೇಶದ ಆರ್ಥಿಕತೆ ಕುಸಿತದ ಹಾದಿಯಲ್ಲಿದೆ. ಜಿಡಿಪಿ ಕುಸಿಯುತ್ತಿದೆ. ಕೈಗಾರಿಕಾ ಉತ್ಪಾದನೆ ಕೂಡ ಕುಸಿದಿದೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೇ, ಉದ್ಯೋಗ ನಷ್ಟ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ಉದ್ಯೋಗ ನಷ್ಟ ತಪ್ಪಿಸಲು ಬೇಡಿಕೆ ಹೆಚ್ಚಾಗುವಂತೆ ಮಾಡಬೇಕು. ಇದಕ್ಕಾಗಿ ಈಗ ಮೋದಿ […]

ಕೇಂದ್ರ ನೌಕರರಿಗೆ ಮೋದಿ ಬಂಪರ್ ಗಿಫ್ಟ್.. ಏನಿದು ಎಲ್‌ಟಿಸಿ ನಗದು ಯೋಜನೆ?
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
ಆಯೇಷಾ ಬಾನು
|

Updated on: Oct 13, 2020 | 6:58 AM

Share

ದೆಹಲಿ: ದೇಶದಲ್ಲಿ ಕೊರೊನಾ ವೈರಸ್​ನಿಂದ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಸಂಪ್ರದಾಯಿಕವಲ್ಲದ ಯೋಜನೆಗಳಿಂದ ದೇಶದಲ್ಲಿ ಬೇಡಿಕೆ ಸೃಷ್ಟಿಯಾಗುವ ನಿರೀಕ್ಷೆ ಇದ್ದು, ಆರ್ಥಿಕತೆ ಚೇತರಿಕೆಯಾಗುವ ವಿಶ್ವಾಸವೂ ಇದೆ. ಇದಕ್ಕಾಗಿ ಹೊಸ ಯೋಜನೆ ಸಿದ್ಧವಾಗಿದೆ.

ದೇಶದ ಆರ್ಥಿಕತೆ ಕುಸಿತದ ಹಾದಿಯಲ್ಲಿದೆ. ಜಿಡಿಪಿ ಕುಸಿಯುತ್ತಿದೆ. ಕೈಗಾರಿಕಾ ಉತ್ಪಾದನೆ ಕೂಡ ಕುಸಿದಿದೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೇ, ಉದ್ಯೋಗ ನಷ್ಟ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ಉದ್ಯೋಗ ನಷ್ಟ ತಪ್ಪಿಸಲು ಬೇಡಿಕೆ ಹೆಚ್ಚಾಗುವಂತೆ ಮಾಡಬೇಕು. ಇದಕ್ಕಾಗಿ ಈಗ ಮೋದಿ ಸರ್ಕಾರ 2 ಹೊಸ ಯೋಜನೆಗಳನ್ನು ಘೋಷಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಲಾಂಗ್ ಟ್ರಾವೆಲ್ಸ್ ಕನ್ಷೆಷನ್ ಅಡಿ ನಗದು ಹಣ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಕೇಂದ್ರ ನೌಕರರಿಗೆ ಎಲ್‌ಟಿಸಿ ನೀಡಲು ನಿರ್ಧಾರ ನಗದು ವೋಚರ್ ಅನ್ನು ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತದೆ. ಇದನ್ನು ಬಳಸಿ ನೌಕರರು ಖರೀದಿಗೆ ಮುಂದಾಗಬಹುದು. ಮುಂದಿನ ವರ್ಷದ ಮಾರ್ಚ್ ಒಳಗೆ ಖರೀದಿ ಮಾಡಬೇಕು.ಇದರಿಂದ ಬೇಡಿಕೆ ಸೃಷ್ಟಿಯಾಗುತ್ತೆ. ಬೇಡಿಕೆ ಸೃಷ್ಟಿಯಾದ್ರೆ, ಉತ್ಪಾದನೆ ಹೆಚ್ಚಿಸಲು ಉದ್ಯೋಗಾವಕಾಶ ಸೃಷ್ಟಿಸಬೇಕಾಗುತ್ತೆ. ಹೀಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಎನ್ನುವ ನಿರೀಕ್ಷೆ ಇದೆ. ಹೊಸ ಉದ್ಯೋಗ ಸೃಷ್ಟಿಯಾಗದೇ ಹೋದರೂ, ಇರುವ ಉದ್ಯೋಗಗಳು ಉಳಿದರೇ, ಸಾಕು ಎನ್ನುವ ಪರಿಸ್ಥಿತಿ ದೇಶದಲ್ಲಿದೆ. ಹೀಗಾಗಿ ಬೇಡಿಕೆ ಸೃಷ್ಟಿಸಲು ಕೇಂದ್ರ 49 ಲಕ್ಷ ಉದ್ಯೋಗಿಗಳಿಗೆ ಎಲ್‌ಟಿಸಿ ಮೂಲಕ ನಗದು ನೀಡುವ ಯೋಜನೆ ಘೋಷಿಸಿದೆ. ಹಾಗಾದ್ರೆ ಖರೀದಿಗೆ ಇರುವ ನಿಯಮಗಳು ಏನು ಅನ್ನೋದನ್ನ ಡೀಟೇಲ್ ಆಗಿ ನೋಡೋದಾದ್ರೆ.

ಖರೀದಿ ನಿಯಮ ಹೀಗಿದೆ ಎಲ್‌ಟಿಸಿ ವೋಚರ್​ನಲ್ಲಿ ಕೇಂದ್ರ ನೌಕರರು ಶೇಕಡಾ 12 ರಷ್ಟು ಜಿಎಸ್‌ಟಿ ಇರುವ ಉತ್ಪನ್ನ ಖರೀದಿ ಮಾಡಬೇಕು. ಆಹಾರೇತರ ಉತ್ಪನ್ನ ಖರೀದಿಸಬೇಕಾದ್ರೂ ಗೃಹಬಳಕೆ ಸಾಮಗ್ರಿ ಖರೀದಿಸಲು ಅವಕಾಶ ನೀಡಲಾಗಿದೆ. ಖರೀದಿ ವೇಳೆ ಡಿಜಿಟಲ್ ಪೇಮೆಂಟ್ ಮಾಡಬೇಕು. ಕೇಂದ್ರ ಸರ್ಕಾರದ 49 ಲಕ್ಷ ನೌಕರರಿಗೆ ಎಲ್‌ಟಿಸಿ ವೋಚರ್ ನೀಡಲು 5,675 ಕೋಟಿ ರೂಪಾಯಿ ಹಣ ನೀಡಲಾಗುತ್ತದೆ. ಹಾಗೇ ಸಾರ್ವಜನಿಕ ಸ್ವಾಮ್ಯದ ಕಂಪನಿ ನೌಕರರಿಗೂ ಎಲ್‌ಟಿಸಿ ವೋಚರ್ ನೀಡಲು 1,900 ಕೋಟಿ ವೆಚ್ಚ ಮಾಡಲಾಗುತ್ತಿದೆ.

ಸರ್ಕಾರಿ ನೌಕರರ ಜೊತೆಗೆ ಕೆಲ ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಬಡ್ಡಿರಹಿತವಾಗಿ 12 ಸಾವಿರ ಕೋಟಿ ಸಾಲ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನೂ ಬಜೆಟ್ ನಲ್ಲಿ ಹೆಚ್ಚುವರಿಯಾಗಿ 25 ಸಾವಿರ ಕೋಟಿ ರೂಪಾಯಿಯನ್ನು ರಸ್ತೆ ನಿರ್ಮಾಣ, ಡಿಫೆನ್ಸ್ ಮೂಲಸೌಕರ್ಯ, ನೀರು ಸರಬರಾಜು, ನಗರಾಭಿವೃದ್ಧಿಗಾಗಿ ಖರ್ಚು ಮಾಡಲಾಗುತ್ತೆ. ಈ ಮೂಲಕ ನಿರ್ಮಲಾ ಸೀತಾರಾಮನ್ ಘೋಷಣೆಗಳಿಂದ ದೇಶದಲ್ಲಿ 1 ಲಕ್ಷ ಕೋಟಿ ಬೇಡಿಕೆ ಸೃಷ್ಟಿಯಾಗುವ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರವಿದೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ