AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್​ಗೆ ಸೆ. 9ರವರೆಗೆ ನ್ಯಾಯಾಂಗ ಬಂಧನ

Amitabh Thakur | ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಅವರಿಗೆ ಸೆ. 9ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್​ಗೆ ಸೆ. 9ರವರೆಗೆ ನ್ಯಾಯಾಂಗ ಬಂಧನ
ಮಾಜಿ ಐಪಿಎಸ್​ ಅಧಿಕಾರಿ ಅಮಿತಾಭ್ ಠಾಕೂರ್
TV9 Web
| Edited By: |

Updated on:Aug 28, 2021 | 7:24 PM

Share

ಲಕ್ನೋ: ಸುಪ್ರೀಂ ಕೋರ್ಟ್​ ಗೇಟ್ ಎದುರು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದ ಅತ್ಯಾಚಾರ ಸಂತ್ರಸ್ತೆ ವಿಡಿಯೋದಲ್ಲಿ ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ (Amitabh Thakur) ಅವರನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಅವರನ್ನು ಇಂದು ಲಕ್ನೋ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ (Judicial Custody) ಒಳಪಡಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಅವರಿಗೆ ಸೆ. 9ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎದುರಾಳಿಯಾಗಿ ಅಮಿತಾಭ್ ಠಾಕೂರ್ 2022ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಅವರನ್ನು ನಿನ್ನೆ ಬಲವಂತವಾಗಿ ಕಾರಿನಿಂದ ಕೆಳಗಿಳಿಸಿ, ಬಂಧಿಸಲಾಗಿತ್ತು. ‘ನೀವು ಎಫ್​ಐಆರ್​ ತೋರಿಸುವವರೆಗೂ ನಾನು ನಿಮ್ಮ ಜೊತೆ ಬರುವುದಿಲ್ಲ’ ಎಂದು ಅಮಿತಾಭ್ ಠಾಕೂರ್ ತಮ್ಮನ್ನು ಬಂಧಿಸಲು ಬಂದು ಪೊಲೀಸರ ವಿರುದ್ಧ ವಾದಿಸಿದ್ದರು. ಅದರ ವಿಡಿಯೋ ಎಲ್ಲೆಡೆ ಹರಿದಾಡಿತ್ತು.

2019ರಲ್ಲಿ ಯುವತಿಯೊಬ್ಬಳು ಬಿಎಸ್​ಪಿ ಸಂಸದ ಅತುಲ್ ರೈ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಫೇಸ್​ಬುಕ್ ಲೈವ್ ವಿಡಿಯೋದಲ್ಲಿ ಅಮಿತಾಭ್ ಠಾಕೂರ್ ಸೇರಿದಂತೆ ಹಲವು ಅಧಿಕಾರಿಗಳ ಹೆಸರನ್ನು ಹೇಳಿ ಆ 24 ವರ್ಷದ ಯುವತಿ ತನ್ನ ಗೆಳೆಯನೊಂದಿಗೆ ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಳು. ಈ ಆರೋಪದಲ್ಲಿ ಇಂದು ಅಮಿತಾಭ್ ಠಾಕೂರ್ ಅವರನ್ನು ಬಂಧಿಸಲಾಗಿತ್ತು.

ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರ ಸೇವಾವಧಿ ಕೊನೆಗೊಳ್ಳುವ ಮೊದಲೇ ಕೇಂದ್ರ ಗೃಹ ಸಚಿವಾಲಯದ ಒತ್ತಡಕ್ಕೆ ಮಣಿದು ಕಳೆದ ಮಾರ್ಚ್ ತಿಂಗಳಲ್ಲಿ ನಿವೃತ್ತಿ ಘೋಷಿಸಿದ್ದರು. ಉತ್ತರ ಪ್ರದೇಶ ಕೇಡರ್​ನ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.

ಕೇಂದ್ರ ಗೃಹಸಚಿವಾಲಯದ ಒಂದು ನಿರ್ಧಾರದ ನಂತರ ಅಮಿತಾಭ್ ಠಾಕೂರ್ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು. ತಮ್ಮ ಬಕಿ ಉಳಿದ ಸೇವಾವಧಿಯಲ್ಲಿ ಮುಂದುವರಿಯಲು ಅಮಿತಾಬ್ ಠಾಕೂರ್ ಸಮರ್ಥರಲ್ಲ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ 2028ರಲ್ಲಿ ನಿವೃತ್ತರಾಗಬೇಕಾಗಿದ್ದ ಅಮಿತಾಭ್ ಠಾಕೂರ್ ಕಳೆದ ಮಾರ್ಚ್​ನಲ್ಲಿ ನಿವೃತ್ತಿ ಪಡೆದಿದ್ದರು.

2017ರಲ್ಲಿ ಅಮಿತಾಭ್ ಠಾಕೂರ್ ತಮ್ಮ ಕೇಡರ್ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಆ್ರಹಿಸಿದ್ದರು. 2015ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ತನಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಅರೋಪಿಸಿದ ಹಿನ್ನೆಲೆಯಲ್ಲಿ ಆಗ ಅಧಿಕಾರದಲ್ಲಿದ್ದ ಅಖಿಲೇಶ್ ಯಾದವ್ ಸರ್ಕಾರ ಅಮಿತಾಭ್ ಠಾಕೂರ್ ಅವರನ್ನು ಅಮಾನತು ಮಾಡಿತ್ತು. 2016ರಲ್ಲಿ ಅವರು ಮತ್ತೆ ಉದ್ಯೋಗಕ್ಕೆ ಮರಳಿದ್ದರು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಲಕ್ನೋ ಪೀಠವು ಏಪ್ರಿಲ್ 2016ರಲ್ಲಿ ಠಾಕೂರ್ ಅವರ ಅಮಾನತು ಆದೇಶವನ್ನು ತಡೆಹಿಡಿದು, ಪುನರ್ ನೇಮಕ ಮಾಡಲು ಆದೇಶಿಸಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಪ್ರಯಾಗ್​ರಾಜ್​​ ರಸ್ತೆ ಬದಿ ಕೂತು ತರಕಾರಿ ಮಾರಿದ ಪ್ರಸಂಗ

Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

(Lucknow Court sends ex-IPS Officer Amitabh Thakur to judicial custody till September 9 for allegedly abetting suicide)

Published On - 7:23 pm, Sat, 28 August 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ