AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ

ಹತ್ತು ವರ್ಷಗಳ ಹಿಂದೆ ತಾಯಿಗೆ ಮಾಡಿದ ಅವಮಾನಕ್ಕೆ ಮಗನೊಬ್ಬ ಆ ವ್ಯಕ್ತಿಯ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ. ಆದರೆ ಇದು ಸತ್ಯ ಘಟನೆ. ಪ್ರತೀಕಾರದ ದಾಹದಿಂದ ಸೋನು ಕಶ್ಯಪ್ ಮನೋಜ್ ಎಂಬಾತನನ್ನು ಹತ್ಯೆಗೈದಿದ್ದಾನೆ.

ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ
ಕೊಲೆImage Credit source: NDTV
ನಯನಾ ರಾಜೀವ್
|

Updated on: Jul 22, 2025 | 12:14 PM

Share

ಲಕ್ನೋ, ಜುಲೈ 22: ಹತ್ತು ವರ್ಷಗಳ ಹಿಂದೆ ತಾಯಿಗೆ ಮಾಡಿದ ಅವಮಾನಕ್ಕೆ ಮಗನೊಬ್ಬ ಆ ವ್ಯಕ್ತಿಯ ಕೊಲೆ(Murder) ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ. ಆದರೆ ಇದು ಸತ್ಯ ಘಟನೆ. ಪ್ರತೀಕಾರದ ದಾಹದಿಂದ ಸೋನು ಕಶ್ಯಪ್ ಮನೋಜ್ ಎಂಬಾತನನ್ನು ಹತ್ಯೆಗೈದಿದ್ದಾನೆ.

ಸೋನು ಕಶ್ಯಪ್, ಮನೋಜ್‌ನನ್ನು ಹುಡುಕುತ್ತಾ ಮುಂದಿನ 10 ವರ್ಷಗಳ ಕಾಲ ಲಕ್ನೋದ ಬೀದಿಗಳಲ್ಲಿ ಓಡಾಡಿದ್ದ. ಸೋನು ಸ್ನೇಹಿತರು ಈ ಕೊಲೆಯಲ್ಲಿ ಸಹಾಯ ಮಾಡಿದ್ದಾರೆ. ಕೊಲೆಯ ನಂತರ ಪಾರ್ಟಿ ಮಾಡುವ ಆಮಿಷವೊಡ್ಡಿ ಸಹಾಯ ಪಡೆದಿದ್ದ. ಎಲ್ಲವನ್ನೂ ಪ್ರಿ ಪ್ಲ್ಯಾನ್ ಆಗಿ ಮಾಡಿದ್ದ. ಆದರೆ ಆತನೇ ಕೊಲೆ ಮಾಡಿದ್ದು ಎಂದು ತಿಳಿಯುತ್ತಿತ್ತೋ ಇಲ್ಲವೋ ಗೊತ್ತಿಲ್ಲ ಆದರೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಒಂದು ಪಾಸ್ಟ್​ನಿಂದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಗಳನ್ನು ಸೋನು, ರಂಜೀತ್, ಆದಿಲ್, ಸಲಾಮು ಹಾಗೂ ರೆಹಮತ್ ಅಲಿ ಎಂದು ಗುರುತಿಸಲಾಗಿದೆ.ಸುಮಾರು 10 ವರ್ಷಗಳ ಹಿಂದೆ ನಡೆದ ಜಗಳವೊಂದರಲ್ಲಿ ಮನೋಜ್ ಸೋನುವಿನ ತಾಯಿಯನ್ನು ಥಳಿಸಿ ಅಲ್ಲಿಂದ ಪರಾರಿಯಾಗಿದ್ದ.

ಮತ್ತಷ್ಟು ಓದಿ: ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ; ವಿಡಿಯೋ ನೋಡಿ

ತನ್ನ ತಾಯಿಗೆ ಆದ ಅವಮಾನದಿಂದ ಅಸಮಾಧಾನಗೊಂಡು ಕೋಪಗೊಂಡ ಸೋನು ಅವನನ್ನು ಹುಡುಕಲು ಹೊರಟಿದ್ದ, ಆದರೆ ಎಷ್ಟೇ ಹುಡುಕಿದರೂ ಮನೋಜ್ ಸುಳಿವು ಪತ್ತೆಯಾಗಿರಲಿಲ್ಲ.ಆದರೆ ಪ್ರಯತ್ನ ಬಿಟ್ಟಿರಲಿಲ್ಲ. ಸುಮಾರು ಮೂರು ತಿಂಗಳ ಹಿಂದೆ. ಮನೋಜ್ ಕೊನೆಗೂ ನಗರದ ಮುನ್ಶಿ ಪುಲಿಯಾ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದ. ಅಲ್ಲಿಂದ ಮತ್ತೆ ಸೇಡು ಹೆಚ್ಚಾಗಿತ್ತು.

ಮನೋಜ್ ನಿತ್ಯ ಏನು ಮಾಡುತ್ತಾನೆ, ಎಲ್ಲಿಗೆ ಹೋಗುತ್ತಾನೆ ,  ದಿನಚರಿಯನ್ನು ಗಮನಿಸಿದ್ದ, ಅವನನ್ನು ಕೊಲ್ಲಲು ಯೋಜನೆ ರೂಪಿಸಿದ್ದ. ಕೊಲೆಯ ಸಂಚಿನಲ್ಲಿ ಸ್ನೇಹಿತರನ್ನೂ ಸೇರಿಸಿಕೊಂಡಿದ್ದ. ಮೇ 22 ರಂದು, ಮನೋಜ್ ತನ್ನ ಅಂಗಡಿಯನ್ನು ಮುಚ್ಚಿ ಒಂಟಿಯಾಗಿ ಹೊರಟ ನಂತರ, ಅವನ ಮೇಲೆ ಕಬ್ಬಿಣದ ರಾಡ್‌ಗಳಿಂದ ದಾಳಿ ಮಾಡಿದ್ದರು.ಚಿಕಿತ್ಸೆಯ ಸಮಯದಲ್ಲಿ ಮನೋಜ್ ಸಾವನ್ನಪ್ಪಿದ್ದ. ಆರೋಪಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ, ಸಿಕ್ಕಿರಲಿಲ್ಲ.

ಕೊಲೆಯ ನಂತರ ಸೋನು ಹಾಗೂ ಇತರೆ ಸ್ನೇಹಿತರು ಪಾರ್ಟಿ ಮಾಡಿದ್ದರು. ಕೆಲವು ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆ ಫೋಟೊ ಶಂಕಿತರನ್ನು ಪತ್ತೆ ಹಚ್ಚಲು ಸಾಧ್ಯವಾಯಿತು. ಕೊಲೆಯ ಸಮಯದಲ್ಲಿ ಅವನು ಧರಿಸಿದ್ದ ಕಿತ್ತಳೆ ಬಣ್ಣದ ಟೀ ಶರ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಧರಿಸಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!