AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

ಮಲತಂದೆಯೊಬ್ಬ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಕಾಲೇಜಿಗೆ 15 ದಿನಗಳ ರಜೆ ಇತ್ತು, ಆದರೆ ಆಕೆಗೆ ಮನೆಗೆ ಹೋಗಲು ಇಷ್ಟವಿರಲಿಲ್ಲ, ತಾಯಿಯ ಒತ್ತಾಯದ ಮೇರೆಗೆ ಮನೆಗೆ ಮರಳಿದ್ದಳು ಎಂದು ಸಂತ್ರಸ್ತೆಯ ಸ್ನೇಹಿತೆ ತಿಳಿಸಿದ್ದಾಳೆ. ಮೃತಳ ಕುತ್ತಿಗೆ, ಹೊಟ್ಟೆ ಹಾಗೂ ಖಾಸಗಿ ಭಾಗಗಳಲ್ಲಿ 18 ಕಡೆ ಇರಿದ ಗಾಯಗಳಿವೆ.

Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ
ಕ್ರೈಂ
ನಯನಾ ರಾಜೀವ್
|

Updated on: Jun 27, 2025 | 9:04 AM

Share

ಲಕ್ನೋ, ಜೂನ್ 27: ಮಲತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ.ಲಕ್ನೋದ ವಿಜ್ಞಾನಪುರಿಯಲ್ಲಿ ಘಟನೆ ನಡೆದಿದೆ. ಕೊಲೆಯಾದಾಕೆ ಬಿಸಿಎ ವಿದ್ಯಾರ್ಥಿನಿಯಾಗಿದ್ದಳು. ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡು ಮೂರು ದಿನಗಳಿಂದ ಮಗಳ ಮಲತಂದೆ ಆಕೆಯ ಬಳಿ ತನ್ನ ಜತೆ ಇರುವಂತೆ ಒತ್ತಡ ಹೇರುತ್ತಿದ್ದ ಎಂದು ತಾಯಿ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಕಾಲೇಜಿಗೆ 15 ದಿನಗಳ ರಜೆ ಇತ್ತು, ಆದರೆ ಆಕೆಗೆ ಮನೆಗೆ ಹೋಗಲು ಇಷ್ಟವಿರಲಿಲ್ಲ, ತಾಯಿಯ ಒತ್ತಾಯದ ಮೇರೆಗೆ ಮನೆಗೆ ಮರಳಿದ್ದಳು ಎಂದು ಸಂತ್ರಸ್ತೆಯ ಸ್ನೇಹಿತೆ ತಿಳಿಸಿದ್ದಾಳೆ.

ಮೃತಳ ಕುತ್ತಿಗೆ, ಹೊಟ್ಟೆ ಹಾಗೂ ಖಾಸಗಿ ಭಾಗಗಳಲ್ಲಿ 18 ಕಡೆ ಇರಿದ ಗಾಯಗಳಿವೆ. ಕೊಲೆಯ ನಂತರ ಆಕೆಯ ಮಲತಂದೆ ಆಕೆಯ ದೇಹದ ಮೇಲೆ ನಿಂತು ನೃತ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಕೆಯ ಅಂತ್ಯಕ್ರಿಯೆ ನೆರವೇರಿದೆ. ಪೊಲೀಸರು ಇನ್ನೂ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಲ್ಲವಾದರೂ, ಅವರು ಮಲತಂದೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಹಾಸ್ಟೆಲ್‌ನಿಂದ ಮನೆಗೆ ಹಿಂತಿರುಗಿದಾಗ ಮಲತಂದೆ ತನ್ನ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಾಯಿ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ಹುಡುಗಿ ಭಯಭೀತಳಾಗಿ ಮೌನವಾಗಿದ್ದಳು. ಈ ಘಟನೆಯಿಂದ ಮಗಳು ಮನೆಗೆ ಬರಲು ಹಿಂಜರಿಯುತ್ತಿದ್ದಳು, ಪದೇ ಪದೇ  ಒತ್ತಾಯ ಮಾಡಿದರೆ ನಂತರ ರಜಾದಿನಗಳಲ್ಲಿ ಕೆಲವು ದಿನಗಳವರೆಗೆ ಮಾತ್ರ ಇರುತ್ತಿದ್ದಳು.

ಮತ್ತಷ್ಟು ಓದಿ: ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಜೂನ್ 30 ರಂದು ಮಗಳು ತನ್ನ ಹಾಸ್ಟೆಲ್‌ಗೆ ಹಿಂತಿರುಗುವ ಮುನ್ನ ಈ ಕೊಲೆ ಸಂಭವಿಸಿದೆ, ಆಗ ಮಲತಂದೆ ಮತ್ತೆ ಅವಳ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅವಳು ವಿರೋಧಿಸಿದಾಗ, ಅವನು ಹಿಂಸಾತ್ಮಕವಾಗಿ ವರ್ತಿಸಿದ್ದಾನೆ.

ಪೊಲೀಸರು ತಾಯಿಯ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಆರೋಪಿಯ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಖಾತೆಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯು ಹೆಚ್ಚಿನ ವಿವರಗಳನ್ನು ಸ್ಪಷ್ಟಪಡಿಸುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?