AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ludhiana Court Blast: ಎಸ್​ಎಫ್​ಜೆ ಕಾರ್ಯಕರ್ತ ಜಸ್ವಿಂದರ್​ ಸಿಂಗ್​ ಮುಲ್ತಾನಿ ಜರ್ಮನಿಯಲ್ಲಿ ಬಂಧನ, ಬಹುದೊಡ್ಡ ದಾಳಿಯ ಸ್ಫೋಟಕ ಮಾಹಿತಿ ಬಹಿರಂಗ

ಜಸ್ವಿಂದರ್ ಸಿಂಗ್​ ಮುಲ್ತಾನಿ ಭಾರತದ ಮೇಲೆ ಬಹುದೊಡ್ಡ ಮಟ್ಟದಲ್ಲಿ ದಾಳಿಗೆ ಹೊಂಚು ಹಾಕಿದ್ದ ಎಂಬ ನಂಬಲರ್ಹ ಮೂಲಗಳಿಂದ ಜರ್ಮನಿ ಪೊಲೀಸರಿಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಜರ್ಮನಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.

Ludhiana Court Blast: ಎಸ್​ಎಫ್​ಜೆ ಕಾರ್ಯಕರ್ತ ಜಸ್ವಿಂದರ್​ ಸಿಂಗ್​ ಮುಲ್ತಾನಿ ಜರ್ಮನಿಯಲ್ಲಿ ಬಂಧನ, ಬಹುದೊಡ್ಡ ದಾಳಿಯ ಸ್ಫೋಟಕ ಮಾಹಿತಿ ಬಹಿರಂಗ
ಲುಧಿಯಾನಾ ಕೋರ್ಟ್​ ಬ್ಲಾಸ್ಟ್​
TV9 Web
| Edited By: |

Updated on:Dec 28, 2021 | 11:08 AM

Share

ಬರ್ಲಿನ್​: ಪಂಜಾಬ್​ನ ಲುಧಿಯಾನ ಸೆಷನ್ಸ್​ ನ್ಯಾಯಾಲಯದೊಳಗೆ ಬಾಂಬ್​ ಬ್ಲಾಸ್ಟ್​ (Ludhiana Court Blast) ಪ್ರಕರಣದೊಂದಿಗೆ ಲಿಂಕ್​ ಹೊಂದಿರುವ ಸಿಖ್​ ಫಾರ್ ಜಸ್ಟೀಸ್​ (SFJ)ಸಂಘಟನೆಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ಜರ್ಮನಿಯಲ್ಲಿ ಡಿ.27ರಂದು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಲ್ತಾನಿ ಜರ್ಮನಿಯವನೇ ಆಗಿದ್ದು, ಅಲ್ಲಿನ ಎರ್​ಫರ್ಟ್​​ನಲ್ಲಿ  ಆತನನ್ನು ಅರೆಸ್ಟ್ ಮಾಡಲಾಗಿದೆ. ಹಾಗೇ, ಭಾರತಕ್ಕೆ ಕಳಿಸುವಂತೆ ಇಲ್ಲಿನ ಅಧಿಕಾರಿಗಳು ಮನವಿ ಮಾಡಿದ್ದು, ಅದಕ್ಕೆ ಸಂಬಂಧಪಟ್ಟ ಪ್ರಕ್ರಿಯೆ ಶೀಘ್ರವೇ ಶುರುವಾಗಲಿದೆ.  

ಈ ಜಸ್ವಿಂದರ್ ಸಿಂಗ್​ ಮುಲ್ತಾನಿ ಭಾರತದ ಮೇಲೆ ಬಹುದೊಡ್ಡ ಮಟ್ಟದಲ್ಲಿ ದಾಳಿಗೆ ಹೊಂಚು ಹಾಕಿದ್ದ ಎಂಬ ಸ್ಫೋಟಕ ಮಾಹಿತಿ ನಂಬಲರ್ಹ ಮೂಲಗಳಿಂದ ಜರ್ಮನಿ ಪೊಲೀಸರಿಗೆ ಸಿಕ್ಕ ಹಿನ್ನೆಲೆಯಲ್ಲಿ ಜರ್ಮನಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಹೀಗಾಗಿ ಭಾರತದ ಮೇಲಾಗುವ ದೊಡ್ಡ ದಾಳಿಯನ್ನು ತಡೆದಂತೆ ಆಗಿದೆ. ಎಸ್​ಎಫ್​ಜೆ ಕಾರ್ಯಕರ್ತನಾಗಿರುವ ಈತ ತನ್ನ ಪಾಕಿಸ್ತಾನಿ ಮೂಲದ ಸಹಚರರು, ಶಸ್ತ್ರಾಸ್ತ್ರ ಕಳ್ಳಸಾಗಣೆದಾರರ ನೆರವಿನಿಂದ ಶಸ್ತ್ರಗಳು,  ಸ್ಫೋಟಕಗಳು, ಗ್ರೆನೇಡ್​ಗಳನ್ನು ವಿವಿಧ ಗಡಿಗಳ ಮೂಲಕ ಪಂಜಾಬ್​ಗೆ ಕಳಿಸುತ್ತಿದ್ದ, ಈ ಮೂಲಕ ಅಲ್ಲಿನ ದಾಳಿಗೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.  ಪಂಜಾಬ್​ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸುವುದೇ ಇವರ ಉದ್ದೇಶ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿತ್ತು. ಲುಧಿಯಾನ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯೇ ಆತ್ಮಾಹುತಿ ಬಾಂಬರ್‌ ಎನ್ನಲಾಗಿದ್ದು, ಆತ ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ. ಇನ್ನು ಪಂಜಾಬ್​ ಪೊಲೀಸರು ಸೆಪ್ಟೆಂಬರ್​ನಲ್ಲಿ ಎಸ್​ಎಫ್​ಐ ಮಾಡ್ಯೂಲ್​​ನ್ನು ಬೇಧಿಸಿದ್ದರು. ಖನ್ನಾದ ರಾಂಪುರ ಗ್ರಾಮದಲ್ಲಿ ಜನಾಭಿಪ್ರಾಯ ಸಂಗ್ರಹ 2020ರ ಲಕ್ಷಗಟ್ಟಲೆ ಕರಪತ್ರಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು ಎಸ್​ಎಫ್​ಐನ ಮೂವರನ್ನು ಬಂಧಿಸಿದ್ದರು. ಈ ಗುಂಪು ಕೂಡ ಲುಧಿಯಾನ ಕೋರ್ಟ್ ಸ್ಫೋಟದೊಂದಿಗೆ ಸಂಬಂಧಹೊಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Viral Video: ಅತಿಥಿಗಳ ಮುಂದೆಯೇ ವಧುವಿನ ಕೈ ಹಿಡಿದು ಎಳೆದ ವರ; ವೈರಲ್ ಆದ​ ವಿಡಿಯೋ ನೋಡಿ

Published On - 11:08 am, Tue, 28 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ