AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
TV9 Web
| Edited By: |

Updated on: Dec 25, 2021 | 2:42 PM

Share

ಲುಧಿಯಾನ: ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್​ನಲ್ಲಿ ಗುರುವಾರ ನಡೆದ ಸ್ಫೋಟದ ತನಿಖೆಯ ಸಂದರ್ಭದಲ್ಲಿ ಈ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಕೈವಾಡವಿರುವುದು ಪತ್ತೆಯಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಹೇಳಿದ್ದಾರೆ. ಈಗಾಗಲೇ ಮಾಜಿ ಪೊಲೀಸ್ ಕಾನ್ಸ್​ಟೆಬಲ್​ನನ್ನು ಈ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಲುಧಿಯಾನ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಲಿಂಕ್ ಇದೆ ಎಂದು ತಿಳಿದುಬಂದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾವು ಭಯೋತ್ಪಾದನೆ ಮತ್ತು ಮಾದಕ ದ್ರವ್ಯಗಳಿಂದ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಲುಧಿಯಾನ ಸ್ಫೋಟ ಪ್ರಕರಣ ಕೂಡ ಈ ಪಟ್ಟಿಗೆ ಸೇರಿದೆ ಎಂದು ಅವರು ಹೇಳಿದ್ದಾರೆ. ನಾವು 24 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದೇವೆ. ನಮಗೆ ಘಟನೆ ನಡೆದ ಸ್ಥಳದಲ್ಲಿ ಹಲವಾರು ಸುಳಿವುಗಳು ಸಿಕ್ಕಿವೆ. ಹರಿದ ಬಟ್ಟೆಗಳು ಮತ್ತು ಸಿಮ್ ಕಾರ್ಡ್, ಮೊಬೈಲ್ ಮತ್ತು ಆರೋಪಿಯ ತೋಳಿನ ಮೇಲೆ ಹಚ್ಚೆ ಇರುವುದು ನಮಗೆ ಗೊತ್ತಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿತ್ತು.

ಲುಧಿಯಾನ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯೇ ಆತ್ಮಾಹುತಿ ಬಾಂಬರ್‌ ಎನ್ನಲಾಗಿದ್ದು, ಆತ ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಬ್​ ಇದೆ ಎಂದು ಹೇಳಿದ ಬಿಜೆಪಿ ನಾಯಕಿ ಉಮಾ ಭಾರತಿ; ಉತ್ತರಪ್ರದೇಶದ ಬಳಿ 2 ತಾಸು ನಿಲುಗಡೆಯಾದ ರೈಲು

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ