AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 25, 2021 | 2:42 PM

Share

ಲುಧಿಯಾನ: ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್​ನಲ್ಲಿ ಗುರುವಾರ ನಡೆದ ಸ್ಫೋಟದ ತನಿಖೆಯ ಸಂದರ್ಭದಲ್ಲಿ ಈ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಕೈವಾಡವಿರುವುದು ಪತ್ತೆಯಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಹೇಳಿದ್ದಾರೆ. ಈಗಾಗಲೇ ಮಾಜಿ ಪೊಲೀಸ್ ಕಾನ್ಸ್​ಟೆಬಲ್​ನನ್ನು ಈ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಲುಧಿಯಾನ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಲಿಂಕ್ ಇದೆ ಎಂದು ತಿಳಿದುಬಂದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾವು ಭಯೋತ್ಪಾದನೆ ಮತ್ತು ಮಾದಕ ದ್ರವ್ಯಗಳಿಂದ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಲುಧಿಯಾನ ಸ್ಫೋಟ ಪ್ರಕರಣ ಕೂಡ ಈ ಪಟ್ಟಿಗೆ ಸೇರಿದೆ ಎಂದು ಅವರು ಹೇಳಿದ್ದಾರೆ. ನಾವು 24 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದೇವೆ. ನಮಗೆ ಘಟನೆ ನಡೆದ ಸ್ಥಳದಲ್ಲಿ ಹಲವಾರು ಸುಳಿವುಗಳು ಸಿಕ್ಕಿವೆ. ಹರಿದ ಬಟ್ಟೆಗಳು ಮತ್ತು ಸಿಮ್ ಕಾರ್ಡ್, ಮೊಬೈಲ್ ಮತ್ತು ಆರೋಪಿಯ ತೋಳಿನ ಮೇಲೆ ಹಚ್ಚೆ ಇರುವುದು ನಮಗೆ ಗೊತ್ತಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿತ್ತು.

ಲುಧಿಯಾನ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯೇ ಆತ್ಮಾಹುತಿ ಬಾಂಬರ್‌ ಎನ್ನಲಾಗಿದ್ದು, ಆತ ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಬ್​ ಇದೆ ಎಂದು ಹೇಳಿದ ಬಿಜೆಪಿ ನಾಯಕಿ ಉಮಾ ಭಾರತಿ; ಉತ್ತರಪ್ರದೇಶದ ಬಳಿ 2 ತಾಸು ನಿಲುಗಡೆಯಾದ ರೈಲು

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್