AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
TV9 Web
| Edited By: |

Updated on: Dec 25, 2021 | 2:42 PM

Share

ಲುಧಿಯಾನ: ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್​ನಲ್ಲಿ ಗುರುವಾರ ನಡೆದ ಸ್ಫೋಟದ ತನಿಖೆಯ ಸಂದರ್ಭದಲ್ಲಿ ಈ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಕೈವಾಡವಿರುವುದು ಪತ್ತೆಯಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಹೇಳಿದ್ದಾರೆ. ಈಗಾಗಲೇ ಮಾಜಿ ಪೊಲೀಸ್ ಕಾನ್ಸ್​ಟೆಬಲ್​ನನ್ನು ಈ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಲುಧಿಯಾನ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಲಿಂಕ್ ಇದೆ ಎಂದು ತಿಳಿದುಬಂದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾವು ಭಯೋತ್ಪಾದನೆ ಮತ್ತು ಮಾದಕ ದ್ರವ್ಯಗಳಿಂದ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಲುಧಿಯಾನ ಸ್ಫೋಟ ಪ್ರಕರಣ ಕೂಡ ಈ ಪಟ್ಟಿಗೆ ಸೇರಿದೆ ಎಂದು ಅವರು ಹೇಳಿದ್ದಾರೆ. ನಾವು 24 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದೇವೆ. ನಮಗೆ ಘಟನೆ ನಡೆದ ಸ್ಥಳದಲ್ಲಿ ಹಲವಾರು ಸುಳಿವುಗಳು ಸಿಕ್ಕಿವೆ. ಹರಿದ ಬಟ್ಟೆಗಳು ಮತ್ತು ಸಿಮ್ ಕಾರ್ಡ್, ಮೊಬೈಲ್ ಮತ್ತು ಆರೋಪಿಯ ತೋಳಿನ ಮೇಲೆ ಹಚ್ಚೆ ಇರುವುದು ನಮಗೆ ಗೊತ್ತಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿತ್ತು.

ಲುಧಿಯಾನ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯೇ ಆತ್ಮಾಹುತಿ ಬಾಂಬರ್‌ ಎನ್ನಲಾಗಿದ್ದು, ಆತ ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಬ್​ ಇದೆ ಎಂದು ಹೇಳಿದ ಬಿಜೆಪಿ ನಾಯಕಿ ಉಮಾ ಭಾರತಿ; ಉತ್ತರಪ್ರದೇಶದ ಬಳಿ 2 ತಾಸು ನಿಲುಗಡೆಯಾದ ರೈಲು

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು